ಗದಗ: ರಾಜ್ಯದಲ್ಲಿ ಅಕ್ರೋಶದ ಜ್ವಾಲೆ ಹೊತ್ತಿಸಿರುವ ಜಾತಿಗಣತಿ ವರದಿಗೆ ಲಿಂಗಾಯತ ವೀರಶೈವ-ಸಮುದಾಯ ಕೊತ ಕೊತ ಅಂತ ಕುದಿಯುತ್ತಿದೆ. ಇದೀಗ ಗದಗನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಶ್ರೀಗಳು ಜಾತಿ ಗಣತಿ ವರದಿಗೆ ಅಸಮಾಧಾನ ಹೊರಹಾಕಿದ್ದಾರೆ.
ಜಾತಿ ಗಣತಿ ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಅಂತ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಶ್ರೀಗಳು, ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿ ಗಣತಿ ಸಿದ್ದಪಡಿಸಿದ್ದಾರೆ. ಆ ಜಾತಿ ಗಣತಿ ವರದಿ ಸಮರ್ಪಕವಾಗಿ ಇಲ್ಲ/ ಆ ವರದಿಯನ್ನ ಸಿದ್ದಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನ ಸಂಪರ್ಕಿಸಿಲ್ಲವೆಂಬ ಆರೋಪವಿದೆ. ಕರ್ನಾಟಕದಲ್ಲಿ ಲಿಂಗಾಯತರು ಬಹು ಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಇದ್ದಾರೆ. ಆದರೆ ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರೋ ಕಾರಣವಾಗಿರಬಹುದು. ಹೀಗಾಗಿ ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ ಅನ್ಯಾಯವಾಗಬಹುದು
ಶಿಕ್ಷಣ, ರಾಜಕಾರಣ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯ ವಾಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ. ಸರ್ಕಾರ ಸ್ವೀಕಾರ ಮಾಡಿರುವ ವರದಿ ಸಮರ್ಪಕವಾಗಿಲ್ಲ ಎಂದು ಸಿದ್ದರಾಮಯ್ಯ ಶ್ರೀಗಳು ಕಿಡಿಕಾರಿದ್ದಾರೆ.
ಮುಷ್ಕರ ಹಿಂಪಡೆಯುವ ಮಾತೇ ಇಲ್ಲ: ಲಾರಿ ಮಾಲೀಕರ ಜೊತೆಗಿನ ಮುಖ್ಯಮಂತ್ರಿ ಸಂಧಾನ ಸಭೆ ವಿಫಲ!
ಲಿಂಗಾಯತರ ಜನಸಂಖ್ಯೆ ಅಂದಾಜಿನ ಪ್ರಕಾರ 1 ಕೋಟಿ 50 ಲಕ್ಷಕ್ಕೂ ಹೆಚ್ಚು ಇದ್ದಾರೆ. ಆದ್ರೆ ಲಿಂಗಾಯತ ಸಂಖ್ಯೆ ವರದಿಯಲ್ಲಿ 72 ಲಕ್ಷಕ್ಕೆ ಇಳಿಸಿದ್ದು ಅತ್ಯಂತ ಆಘಾತಕಾರಿಯಾಗಿದೆ. ಬೇರೆ ಬೇರೆ ಜಾತಿಯವರು ಮುನ್ನಲೆಗೆ ಬಂದಿದ್ದಾರೆ. ಸರ್ಕಾರ ಇನ್ನೊಮ್ಮೆ ಪರಿಶೀಲನೆ ಮಾಡಿ ನೈಜ ವರದಿ ಬಿಡುಗಡೆ ಮಾಡಬೇಕು. ಸರ್ಕಾರ ಯಾರಿಗೂ ಅನ್ಯಾಯವಾಗದಂತಹ ವರದಿಯನ್ನ ಸಿದ್ದಪಡಿಸಿ ಯೋಜನೆ ಪೂರ್ಣಗೊಳಿಸಬೇಕು. ಜಾತಿ ಗಣತಿ ಮಾಡಿರುವ ಉದ್ದೇಶ ಸ್ಪಷ್ಟವಾಗಿಲ್ಲ. ಒಳಗಡೆ ಯಾವುದೋ ಒಂದು ಉದ್ದೇಶ ಇಟ್ಟಿಕೊಂಡು ಮಾಡಿರಬಹುದು. ಜಾತಿ ಗಣತಿ ವರದಿಗೆ ಬಹುತೇಕ ಲಿಂಗಾಯತರ ವಿರೋಧವಿದೆ. ಸಚಿವ ಸಂಪುಟದಲ್ಲಿರುವಂತಹ ಕಾಂಗ್ರೆಸ್ ನ ಮಂತ್ರಿಗಳ ವಿರೋಧವಿದೆ. ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದ ವಿಚಾರವಾಗಿದೆ.
ಸಮಾಜದ ಪ್ರಮುಖರು, ಗಣ್ಯ ವ್ಯಕ್ತಿಗಳು, ಮಠಾಧೀಶರು ಸಮಾಲೋಚನೆ ಮಾಡಿ ಮುಂದಿನ ತೀರ್ಮಾನ ತಗೆದುಕೊಳ್ಳುತ್ತೇವೆ. ತೋಂಟದಾರ್ಯ ಮಠದ ನಿಲುವು ಯಾವ ಜಾತಿಗೂ ಅನ್ಯಾಯವಾಗಬಾರದು. ಸಾಮಾಜಿಕ ನ್ಯಾಯದ ಪರ ಸರ್ಕಾರ ಇರಬೇಕೆಂದು ಕೇಳಿಕೊಳ್ಳುತ್ತೇನೆ.
ರಾಜಕೀಯ ಉದ್ದೇಶದಿಂದ ಜಾತಿ ಗಣತಿ ಜಾರಿ ತರುತ್ತಿರಬಹುದು. ಜಾತಿ ಗಣತಿಯಲ್ಲಿ ಲಿಂಗಾಯತರಿಗೆ ಹೇಗೆ ಅನ್ಯಾಯವಾಗಿದೆಯೋ ಅದೇ ರೀತಿ ಒಕ್ಕಲಿಗರಿಗೂ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸಚಿವ ಸಂಪುಟದ ಪ್ರಮುಖ ಸಚಿವರೇ ಹೇಳಿದ್ದಾರೆ. ಸಂಪುಟದಲ್ಲಿರುವ ಲಿಂಗಾಯತ ಹಾಗೂ ಒಕ್ಕಲಿಗ ಸಚಿವರು ಈ ವರದಿಯಲ್ಲಿ ದೋಷವಿದೆ, ವರದಿ ಸಮರ್ಪಕವಾಗಿಲ್ಲ. ಇದನ್ನು ಮರಳಿ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಏ.17ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಏನ್ನು ತೀರ್ಮಾನ ಆಗುತ್ತೇ ಕಾದು ನೋಡೋಣ ಎಂದು ತೋಂಟದ ಸಿದ್ದರಾಮ ಶ್ರೀಗಳು ಹೇಳಿದ್ದಾರೆ.