ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಶುರುವಾಗಿದೆ. ಮೊದಲ ಬಾರಿಗೆ ಪರೀಕ್ಷಾ ಅಕ್ರಮ ತಡೆಗೆ KEA ಹೊಸ ತಂತ್ರಜ್ಞಾನ ಬಳಕೆ ಮಾಡಿದೆ.
ಸೋಲಿನಿಂದ ಕಂಬ್ಯಾಕ್ ಆಗಲು ಸಲ್ಮಾನ್ ಖಾನ್ ರೆಡಿ? 59 ವಯಸ್ಸಿನಲ್ಲಿಯೂ ಅದೇನ್ ಫಿಟ್ನೆಸ್!
ಪರೀಕ್ಷಾ ಕೇಂದ್ರಗಳಲ್ಲಿ ಕ್ಯೂಆರ್ ಸ್ಕ್ಯಾನ್ ಮಾಡಿದ ನಂತರವೇ ವಿದ್ಯಾರ್ಥಿಗಳನ್ನು ಎಕ್ಸಾಂ ಹಾಲ್ಗೆ ಕಳುಹಿಸಲಾಗುವುದು. ಈ ಮೂಲಕ ಡೂಪ್ಲಿಕೇಟ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ತಪ್ಪಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.
ಏನಿದು ಕ್ಯೂಆರ್ ಸ್ಕ್ಯಾನ್ ?
<span;>* ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಕ್ಯೂಆರ್ ಸ್ಕ್ಯಾನ್ ಮೂಲಕ ತಪಾಸಣೆ.
<span;>* ಪ್ರತಿ ಕೇಂದ್ರದ ಮುಖ್ಯಸ್ಥರಿಗೆ ಕ್ಯೂಆರ್ ಸ್ಕ್ಯಾನ್ ಮಾಡಲು ಆಪ್ ವ್ಯವಸ್ಥೆ ಮಾಡಲಾಗಿರುತ್ತದೆ.
<span;>* ಕ್ಯೂಆರ್ ಸ್ಕ್ಯಾನ್ನಲ್ಲಿ ಮೊದಲೇ ವಿದ್ಯಾರ್ಥಿ ಮಾಹಿತಿಯನ್ನು ಕೆಇಎ ಅಪ್ಲೋಡ್ ಮಾಡಿರುತ್ತದೆ.
<span;>* ವಿದ್ಯಾರ್ಥಿಗಳನ್ನ ಸ್ಕ್ಯಾನ್ ಮಾಡಿದ ಕೂಡಲೇ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಕೆಇಎಗೆ ತಲುಪುತ್ತದೆ.
<span;>* ಒಂದು ವೇಳೆ ಬೇರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಇದರಿಂದ ಪತ್ತೆ ಹಚ್ಚಬಹುದು.
<span;>* ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಸ್ಕ್ಯಾನ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
<span;>* ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಲಾಗಿದೆ.
<span;>* ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ.
<span;>* ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ
.