ಹುಬ್ಬಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಸೋಲಿಗೆ ವೀರ ಸಾವರ್ಕರ್ ಕಾರಣ ಎಂದು ಸಿಎಂ ಹೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಇದನ್ನು ಸಾಬೀತು ಮಾಡಿದ್ರೆ ನಾನು ನನ್ನ ವಿಧಾನ ಪರಿಷತ್ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವೆ, ಒಂದು ವೇಳೆ ಇದನ್ನು ಸಾಬೀತು ಮಾಡಲು ಸಿಎಂ ಸಿದ್ದರಾಮಯ್ಯ ವಿಫಲವಾದ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ಸನ್ಯಾಸ ಸ್ವೀಕಾರ ಮಾಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲ್ ಹಾಕಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅಂತವರು, ಹೇಳಿದ ಹೇಳಿಕೆಗಳಿಗೆ ಸಮರ್ಥಿಸಿ ಸಿಎಂ ಸಿದ್ದರಾಮಯ್ಯ ಮಾತನಾಡುವುದು ಬಹಳ ವಿಪರ್ಯಾಸದ ಸಂಗತಿ, ಇಂತಹ ಹಗುರವಾದ ಹೇಳಿಕೆಗಳನ್ನು ಸಿದ್ದರಾಮಯ್ಯ ಕೊಡಬಾರದಿತ್ತು, ಇದು ಅವರ ವ್ಯಕ್ತಿತ್ವಕ್ಕೆ ಗೌರವ ತರುವುದಿಲ್ಲ, ಸಿದ್ದರಾಮಯ್ಯ ನಾವು ಹಾಕಿದ ಸವಾಲನ್ನು ಸ್ವೀಕಾರ ಮಾಡಬೇಕು ಎಂದರು.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ರಾಜ್ಯದಲ್ಲಿ ಬಿಜೆಪಿಯಿಂದ ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಆರಂಭ ಮಾಡಲಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಆಡಳಿತ ಸರ್ಕಾರ ಕೇವಲ ಗ್ಯಾರಂಟಿ ಮೂಲಕ ಐದು ವರ್ಷ ಪೂರೈಸಿದರೇ ಸಾಕು ಎಂಬ ಚಿಂತನೆಯಲ್ಲಿದೆ ಎಂದರು.
ಜಾತಿಗಣತಿ ವರದಿ ವಿರೋಧ ಮಾಡಲು ಕಾರಣಗಳಿವೆ. ಸ್ವಾಗತಿಸಲು ಕೆಲವು ಕಾರಣಗಳಿವೆ. ಮುಸ್ಲಿಮರನ್ನು ಒಲೈಕೆ ಮಾಡಲು ನಂ.1 ಅಂತ ತೋರಿಸಿದ್ದಾರೆ. ಮುಸ್ಲಿಮರನ್ನ ಡಿವಿಷನ್ ಮಾಡಿಲ್ಲ. ಒಟ್ಟು ಮಾಡಿ ಗಣತಿ ಮಾಡಿದ್ದಾರೆ. ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ ಅವರನ್ನು ವಿಂಗಡಣೆ ಮಾಡಿದ್ದಾರೆ. ಮುಸ್ಲಿಮರು ಜಾಸ್ತಿಯಿದ್ದರೆ ಅವರು ಹೇಗೆ ಮೈನಾರಿಟಿ ಆಗುತ್ತಾರೆ. ಹಾಗಾದರೆ ಮುಸ್ಲಿಮರು ಮೈನಾರಿಟಿ ಅಲ್ಲ ಎಂದು ಸರ್ಕಾರ ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.