ಬೆಂಗಳೂರು: ಒಂದನೇ ತರಗತಿ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಕಡ್ಡಾಯವಾಗಿರಬೇಕು. ರಾಜ್ಯದಲ್ಲಿ ಲಕ್ಷಾಂತರ ಪೋಷಕರು ತಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸೋ ತವಕದಲ್ಲಿದ್ರೂ ಈ ವಯೋಮಿತಿ ಗೊಂದಲದಿಂದ ಪರದಾಡುತ್ತಿದ್ದರು. ಇದೀಗ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಮಹತ್ವದ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.
Chanakya Niti: ಚಾಣಕ್ಯನ ಪ್ರಕಾರ ಮಕ್ಕಳ ವಿಷಯದಲ್ಲಿ ಪೋಷಕರು ಈ ತಪ್ಪುಗಳನ್ನು ಮಾಡಬಾರದು…!
ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದರು.
ವಯೋಮಿತಿ ವಿಚಾರದಲ್ಲಿ ಪೋಷಕರು ಗೊಂದಲದಲ್ಲಿದ್ದಾರೆ. ದೇಶದಲ್ಲಿ ಎಲ್ಲ ಕಡೆಗಳಲ್ಲಿ ಒಂದನೇ ತರಗತಿ ಸೇರ್ಪಡೆಗೆ ಆರು ವರ್ಷ ವಯೋಮಿತಿ ಇದೆ. ಎರಡು ತಿಂಗಳು ಮಾತ್ರ ಸಡಿಲಿಕೆ ಮಾಡಬಹುದಷ್ಟೆ. ನಮ್ಮದು ಎಸ್ಇಪಿ ಇರುವುದರಿಂದ, ಅವರ ಬಳಿ ಕೇಳಿದಾಗ, ಮಕ್ಕಳು ಕಡಿಮೆ ವಯಸ್ಸಿನಲ್ಲೇ ಸೇರಿಕೊಳ್ಳುತ್ತಿದ್ದಾರೆ ಎಂದಿದ್ದರು ಎಂದು ಸಚಿವರು ತಿಳಿಸಿದರು.