ಚಿಕ್ಕೋಡಿ:- ಕೃಷ್ಣಾ ನದಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಪಕ್ಕದ ಕೃಷ್ಣಾ ನದಿಯಲ್ಲಿ ಜರುಗಿದೆ.
40 ವರ್ಷದ ಸಂಗೀತಾ ಶಿವಾಜಿ ಮಾಂಜರೇಕರ್ ನೀರುಪಾಲಾಗಿರುವ ಮಹಿಳೆ. ಕೃಷ್ಣಾ ನದಿಗೆ ಸಂಗೀತಾ ಅವರು ಬಾಗಿನ ಅರ್ಪಿಸಲು ತೆರೆಳಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ನದಿಯಲ್ಲಿ ಕಣ್ಮರೆಯಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳವು ಮಹಿಳೆಗಾಗಿ ಹುಡುಕಾಟ ನಡೆಸುತ್ತಿದೆ.