ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂಗೆ ಇನ್ಮುಂದೆ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಿದೆ. ಈ ಮೂಲಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಶಾಕ್ ನೀಡಿದೆ.
ಕ್ರೀಡಾಂಗಣವು ಅಗತ್ಯ ಅಗ್ನಿಸುರಕ್ಷತಾ ಮಾನದಂಡಗಳನ್ನು ಪಾಲಿಸದಿರುವುದು ಮತ್ತು ಫೈರ್ ಸೇಫ್ಟಿ ಸರ್ಟಿಫಿಕೇಟ್ (NOC) ಪಡೆಯದಿರುವುದು. ಈ ಕುರಿತು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು ಬೆಸ್ಕಾಂಗೆ ಪತ್ರ ಬರೆದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಒಡೆತನದ ಚಿನ್ನಸ್ವಾಮಿ ಕ್ರೀಡಾಂಗಣದ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಘಟನೆಯ ನಂತರ, ಕ್ರೀಡಾಂಗಣದ ಸುರಕ್ಷತಾ ವ್ಯವಸ್ಥೆಗಳ ಕುರಿತು ತೀವ್ರ ಚರ್ಚೆ ಆರಂಭವಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಕೆಎಸ್ಸಿಎ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸಿತ್ತು. ಇದರ ಜೊತೆಗೆ, ಕ್ರೀಡಾಂಗಣವು ಅಗ್ನಿಸುರಕ್ಷತಾ ಮಾನದಂಡಗಳನ್ನು ಪಾಲಿಸಿಲ್ಲ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಇದೀಗ ಪವರ್ ಕಟ್ ಆದೇಶವನ್ನೂ ಹೊರಡಿಸಲಾಗಿದೆ.