ಬೆಂಗಳೂರು:- ಚಿನ್ನಸ್ವಾಮಿ ಕಾಲ್ತುಳಿತ ಘಟನೆ ಖಂಡಿಸಿ, ಮಂಗಳವಾರ ಬಿಜೆಪಿ ಪ್ರತಿಭಟನೆ ಮಾಡ್ತಿರೋ ವಿಚಾರವಾಗಿ ಬಿಕೆ ಹರಿಪ್ರಸಾದ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಿಮಗಿದು ಗೊತ್ತಾ!? ಮನೆ ಮುಂದೆ ಈ ಹೂವಿನ ಗಿಡ ಬೆಳೆಸಿದರೆ ಆರ್ಥಿಕ ಸಮಸ್ಯೆ ಶಾಶ್ವತ ದೂರವಾಗುತ್ತಂತೆ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಾವಿನಲ್ಲೂ ವಿಪಕ್ಷಗಳು ರಾಜಕೀಯ ಮಾಡೋದು ಬಿಡಬೇಕು. ಚಿನ್ನಸ್ವಾಮಿ ಘಟನೆ ಬಗ್ಗೆ ದುಃಖ ಇದೆ. ಈ ಪ್ರಕರಣವು ಇಡೀ ಸರ್ಕಾರಕ್ಕೆ ನೋವು ತಂದಿದೆ. ಎಲ್ಲಿ ತಪ್ಪಾಗಿದೆ ಅಂತ ಕ್ರಮ ಆಗಿದೆ. 25 ಲಕ್ಷ ಪರಿಹಾರ ಕೊಡಲಾಗಿದೆ ಎಂದಿದ್ದಾರೆ.
ಏನೇ ಫೆಲ್ಯೂರ್ ಆದ್ರೂ ಸರ್ಕಾರದ ಜವಾಬ್ದಾರಿ ಆಗುತ್ತದೆ. ಅಹಮದಾಬಾದ್ ವಿಮಾನ ಅಪಘಾತಕ್ಕೆ ಯಾರು ಜವಾಬ್ದಾರಿ ತೆಗೆದುಕೊಳ್ತಾರೆ. ಉತ್ತರಪ್ರದೇಶದ ಕುಂಭಮೇಳದಲ್ಲಿ ಸಾವಾಗಿದಕ್ಕೆ ಯಾರು ಜವಾಬ್ದಾರಿ ತೆಗೆದುಕೊಂಡಿದ್ರು. ನಾವು ಅಭಿವೃದ್ಧಿ ಕೆಲಸ ಮಾಡ್ತಿದ್ದೇವೆ. ಬಿಜೆಪಿ ಅವರಿಗೆ ಏನು ಇಲ್ಲ. ಅದಕ್ಕೆ ಪ್ರತಿಭಟನೆ ಮಾಡ್ತಾರೆ. ಅವರು ಪ್ರತಿಭಟನೆ ಮಾಡಲಿ ಎಂದು ಹೇಳಿದ್ದಾರೆ.
ಕಾಲ್ತುಳಿತ ಘಟನೆ ನಾವು ಒಪ್ಪಲ್ಲ. ಮುಂದೆ ಹೀಗೆ ಆಗದಂತೆ ಏನು ಮಾಡಬೇಕೋ ಅದನ್ನ ಸರ್ಕಾರ ಮಾಡುತ್ತದೆ. ಅನೇಕ ಕಡೆ ಇಂತಹ ಘಟನೆ ನಡೆದಿದೆ. ರಾಜ್ ಕುಮಾರ್ ಸಾವಿನ ಸಮಯದಲ್ಲಿ ಕಾಲ್ತುಳಿತ ಆಗಿದ್ದಾಗ ಕುಮಾರಸ್ವಾಮಿ ಹೊಣೆ ಹೊತ್ತರಾ? ವಿಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡ್ತಾರೆ ಅಂತ ನನಗೆ ಗೊತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.