ಬೆಂಗಳೂರು: ಸಿದ್ದರಾಮಯ್ಯ ಅವರೇ.. ನಿಮಗೆ ಮಾನ ಮರ್ಯಾದೆ ಇದ್ದರೆ ಇದರ ಹೊಣೆ ಹೊರಬೇಕು ಎಂದು ಕೇಂದ್ರ ಸಚಿವ ಸೋಮಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದೊಂದು ಲಜ್ಜೆಗೇಡಿ ಸರ್ಕಾರ. ಹೆಸರು ಬರುತ್ತೆ ಎಂದು ತರಾತುರಿಯಲ್ಲಿ ಕಾರ್ಯಕ್ರಮ ಮಾಡಿದರು. ಒಂದು ವಾರ ಬಿಟ್ಟು ಮಾಡಿದ್ರೆ ಏನು ಆಗುತ್ತಿತ್ತು. ಇಂತಹ ಕೆಲಸ ಮಾಡಿ ನೀವು ಪಾಪಕ್ಕೆ ಗುರಿಯಾಗಿದ್ದೀರಾ ಎಂದು ಕಿಡಿಕಾರಿದರು.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಪೊಲೀಸ್ ಕಮೀಷನರ್ ದಯಾನಂದ್ ಪ್ರಾಮಾಣಿಕ ಅಧಿಕಾರಿ. ಅವರನ್ನು ಅಮಾನತು ಮಾಡ್ತೀರಾ. ಸಿದ್ದರಾಮಯ್ಯ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ಅವರೇ ಯಾರು ನಿಮ್ಮ ಕಿವಿ ಕಚ್ಚಿದ್ರು ಇವತ್ತು ಮಾಡಿ ಅಂತ. ನಿಮ್ಮ ಅನುಭವ, ಚಿಂತನೆ ಏನಾಯ್ತು? ಮುಗ್ಧರನ್ನ ಸಾಯಿಸಿ ಶಾಪಗ್ರಸ್ತ ಸರ್ಕಾರ ಆಗಿದೆ ಈ ಸರ್ಕಾರ ಎಂದು ಹರಿಹಾಯ್ದರು.
ನಿಮಗೆ ಮಾನ ಮರ್ಯಾದೆ ಇದ್ದರೆ ಇದರ ಹೊಣೆ ಹೊರಬೇಕು. ಇಂತಹ ಘಟನೆ ಮಾಡಿ ಇತಿಹಾಸದಲ್ಲಿ ನೀವು ಉಳಿದುಕೊಂಡ್ರಿ. ಈಗ ಕಣ್ಣು ಒರೆಸೋ ತಂತ್ರ ಮಾಡ್ತಿದ್ದೀರಾ. ಒಳ್ಳೆಯ ಅಧಿಕಾರಿಗಳನ್ನು ಅಮಾನತು ಮಾಡಿದ್ರೆ ಅಧಿಕಾರಿಗಳಿಗೆ ನಿಮ್ಮ ಜೊತೆ ಕೆಲಸ ಮಾಡೋಕೆ ಹೇಗೆ ಆಗುತ್ತದೆ. ಸರ್ಕಾರಕ್ಕೆ ಹೆಸರು ಮಾಡೋ ಆತುರದ ಪರಮಾವಧಿ. ಇದಕ್ಕೆ ನಿಮಗೆ ಕೊಡಲಿ ಪೆಟ್ಟಾಗಿದೆ. ಈ ಘಟನೆ ಅಕ್ಷಮ್ಯ ಅಪರಾಧ. ಇದಕ್ಕೆ ನೀವೆ ಬೆಲೆ ತೆರಬೇಕು ಎಂದು ಸರ್ಕಾರದ ವಿರುದ್ಧ ಗುಡುಗಿದರು.