ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಸಾವು, ಮೂವರು ಗಂಭೀರ!
ಚಿತ್ರದುರ್ಗ:-ಮೊಳಕಾಲ್ಮೂರಿನ ಬೊಮ್ಮಕ್ಕನಹಳ್ಳಿ ಸಮೀಪ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಇಂದು ನಡೆದಿದೆ. ಹನಿಟ್ರ್ಯಾಪ್| ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ- ಗೋವಿಂದ ಕಾರಜೋಳ ಆಗ್ರಹ! ಕಾರು ಚಳ್ಳಕೆರೆ ಕಡೆಯಿಂದ ಮೊಳಕಾಲ್ಮೂರು ಮಾರ್ಗವಾಗಿ ಬಳ್ಳಾರಿಗೆ ಹೋಗುತ್ತಿತ್ತು. ಈ ಮಧ್ಯದಲ್ಲಿ ಕಾರು ಪಲ್ಟಿಯಾಗಿ ನುಜ್ಜುಗಜ್ಜಾಗಿದೆ. ಕಾರಿನಲ್ಲಿದ್ದ ಐದರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯಗಳಾಗಿವೆ.ರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed