ಬೆಂಗಳೂರು:- ರಾಜ್ಯ ರಾಜಕೀಯದಲ್ಲಿ ಸಧ್ಯ ಹೆಚ್ಚು ಚರ್ಚೆಯಲ್ಲಿರುವ ವಿಚಾರ ಅಂದ್ರೆ ಅದು ಸಿಎಂ ಬದಲಾವಣೆ ವಿಚಾರ. ರಾಜಣ್ಣ ಅವರ ಆ ಒಂದು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿ ಮಾಡಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೈರತಿ ಸುರೇಶ್, ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣ ಅವರನ್ನೇ ಕೇಳಬೇಕು. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಇದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಇದ್ದಾರೆ. ಸದ್ಯಕ್ಕೆ ಅವರ ಸ್ಥಾನ ಅಭಾದಿತ ಎಂದಿದ್ದಾರೆ.
ದಸರಾ ಯಾವ ರೀತಿ ಮಾಡಬೇಕು ಎಂದು ಸಿಎಂ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದೆ. ಸುಮಾರು 40 ರಿಂದ 50 ಕೋಟಿ ರೂ. ವೆಚ್ಚದಲ್ಲಿ ಆಚರಣೆ ಆಗಬೇಕು ಎಂಬ ಚರ್ಚೆ ಮಾಡಲಾಗಿದೆ. ಉದ್ಘಾಟಕರು ಯಾರು ಎಂದು ತೀರ್ಮಾನ ಮಾಡುವ ಅಧಿಕಾರ ಸಿಎಂ ಅವರಿಗೆ ಕೊಡಲಾಗಿದೆ. ಒಂದೇ ವಿಚಾರಕ್ಕೆ ಸಂಬಂಧಿಸಿದ ನಾಲ್ಕೈದು ಸ್ಥಬ್ಧಚಿತ್ರಗಳು ಇರಬಾರದು ಎಂದು ತೀರ್ಮಾನ ಆಗಿದೆ. ಜನಪರವಾದ ಸ್ತಬ್ಧ ಚಿತ್ರಗಳು ಇರಬೇಕು, ಮೈಸೂರು ಸಂಸ್ಕೃತಿ ಎತ್ತಿ ಹಿಡಿಯುವ ಸ್ತಬ್ಧ ಚಿತ್ರಗಳಿಗೆ ಪ್ರಮುಖ ಆದ್ಯತೆ ಕೊಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ
ಕೋಲಾರ ಶಾಸಕರಿಂದ ಉಸ್ತುವಾರಿ ಬದಲಾವಣೆ ಬೇಡಿಕೆ ವಿಚಾರವಾಗಿ, ಎಲ್ಲರ ಕಣ್ಣಿಗೂ, ತಿನ್ನೋಕು ಬೆಣ್ಣೆ ಕೊಡುವುದು, ಸುಣ್ಣ ಕೊಟ್ಟು ಅಭ್ಯಾಸ ನನಗಿಲ್ಲ. ಅದರ ಬಗ್ಗೆ ನಂಬಿಕೆ ಇಲ್ಲ, ಒಂದೇ ಮನೆಯಲ್ಲಿ ಅಣ್ಣ ತಮ್ಮಂದಿರ ಜಗಳ ಆಡ್ತಾ ಇರ್ತಾರೆ ಅದೇ ರೀತಿ ಭಿನ್ನಾಭಿಪ್ರಾಯ ಇರುತ್ತದೆ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ. ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.