ಬೆಂಗಳೂರು:- ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಚಿವರುಗಳ ವಿರುದ್ಧ ಶಾಸಕರ ಆರೋಪ ಹಾಗೂ ಸಚಿವರ ರಾಜೀನಾಮೆಗೆ ಒತ್ತಾಯ ವಿಚಾರ ನಡೆದಾಗ ನಾನು ವಿದೇಶದಲ್ಲಿದ್ದೆ. ನಾನೂ ನೋಡಿದ್ದೇನೆ, ಶಾಸಕರು ಸಿಎಂ ಅವರನ್ನು ಭೇಟಿಯಾಗಿ ಅದರ ಬಗ್ಗೆ ಮಾಹಿತಿ ನೀಡುತ್ತಾರೆ. ಯಾರ್ಯಾರು ಹೇಳಿಕೆ ಕೊಟ್ಟಿದ್ದಾರೆ ಅವರನ್ನು ಸಿಎಂ ಕರೆದು ಮಾತನಾಡುತ್ತಾರೆ ಎಂದರು.
ಏನೇನು ಸಮಸ್ಯೆ ಇದೆಯೋ ಅದನ್ನು ಸಿಎಂ ಪರಿಹರಿಸುತ್ತಾರೆ. ಏನೇ ಸಮಸ್ಯೆ ಇದ್ದರೂ ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಶಾಸಕರ ಅಭಿಪ್ರಾಯ ಗೌರವಿಸಬೇಕಾಗುತ್ತದೆ, ಅದನ್ನ ಮಾಡುತ್ತಾರೆ. ಯಾರ ವಿರುದ್ಧ ಆರೋಪ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ. ಯಾವ ಉಸ್ತುವಾರಿ ಸಚಿವರು ಸ್ಪಂದಿಸುತ್ತಿಲ್ಲ, ಯಾರು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುತ್ತಾರೆ ಅವರ ವಿರುದ್ದ ಸಿಎಂ, ಡಿಸಿಎಂ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.