ಗದಗ: ಜಾತಿಗಣತಿ ವಿಚಾರದಲ್ಲಿ ಸಿಎಂ ರಾಜಕೀಯ ಲಾಭ-ನಷ್ಟ ಲೆಕ್ಕ ಹಾಕಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ವಿಚಾರದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಏನು ಬದ್ಧತೆ ಇದೆ. ಆ ಬದ್ಧತೆಯನ್ನು ಸಿಎಂ ಅಭಿವ್ಯಕ್ತ ಮಾಡಿದ್ದಾರೆ. ಸಿಎಂ ರಾಜಕೀಯ ಲಾಭ-ನಷ್ಟ ಲೆಕ್ಕ ಹಾಕಿಲ್ಲ ಎಂದರು.
ಜಾತಿ-ಉಪಜಾತಿಗಳ ವಿಂಗಡನೆ ಮಾಡಿದ್ದು, ಮುಸ್ಲಿಂ ವಿಂಗಡನೆ ಯಾಕಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರು ಮುಸ್ಲಿಂ ಅಂತ ಬರೆದುಕೊಟ್ಟಿದ್ದಾರೆ. ನಿಮ್ಮ ಜಾತಿ ಯಾವುದು ಎಂಬುದನ್ನು ನೀವೇ ಬರೆದು ಕೊಟ್ಟಿದ್ದಿರಲ್ಲ.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ನೀವೇ ಜಾತಿ-ಉಪಜಾತಿಗಳನ್ನು ವಿಂಗಡನೆ ಮಾಡಿಕೊಂಡರೇ ಯಾರು ಏನು ಮಾಡಬೇಕು. ನೀವೇ ಹೇಳಿದ್ದನ್ನು ತೆಗೆದುಕೊಂಡರೇ ಅದು ಅವೈಜ್ಞಾನಿಕನಾ ಎಂದು ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಇಷ್ಟೆಲ್ಲಾ ಅವಕಾಶ ಕೊಟ್ಟಾಗಲೂ ರಾಜಕೀಯ ಮಾಡುವುದು ಸರಿಯಾದ ಕ್ರಮವಲ್ಲ. ಅವೈಜ್ಞಾನಿಕ ಯಾವುದು ಇದೆ. ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ನಿಮ್ಮ ಮನೆಗಳಲ್ಲಿ ಗಣತಿ ಮಾಡಿದ್ದರೆ ನಮ್ಮದು ಈ ಜಾತಿ ಅಂತ ಅದಕ್ಕೆ ನಿಮ್ಮ ಸಹಿ ಇದೆ. ಹೀಗಾಗಿ ಅದು ಹೇಗೆ ಅವೈಜ್ಞಾನಿಕ ಆಗುತ್ತದೆ ಎಂದು ಪ್ರಶ್ನಿಸಿದರು.