ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ತಮಿಳು, ಮಲಯಾಳಂ, ಕನ್ನಡ ಸೇರಿ ಬಹುಭಾಷೆಗಳ ಸಿನಿಮಾಗಳಲ್ಲಿ ತನ್ನ ಕಲಾ ಸಾಮರ್ಥ್ಯ ಪ್ರದರ್ಶಿಸಿ ಜನಮೆಚ್ಚುಗೆ ಕಳಿಸಿದ್ದೀರಿ. ಈ ಸಿನಿಮಾ ಕೂಡ ಯಶಸ್ವಿ ಕಾಣುತ್ತದೆ. ಸರ್ಕಾರದಿಂದ ಅಗತ್ಯ ಇರುವ ಸಹಕಾರ ನೀಡಲಾಗುವುದು. ನಿಮ್ಮ ಇಡೀ ಕಲಾ ತಂಡಕ್ಕೆ ಮತ್ತು ಸಿನಿಮಾ ತಂಡಕ್ಕೆ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ಹಾರೈಸಿದರು. ಮುಖ್ಯಮಂತ್ರಿಗಳ ಆಶೀರ್ವಾದ ಪಡೆದ ರವಿ ಬಸ್ರೂರು ತಂಡ ಅವರನ್ನು ಸಿನಿಮಾ ವೀಕ್ಷಣೆಗೆ ಬರಬೇಕು ಎಂದು ಆಹ್ವಾನಿಸಿದರು. ಬರುತ್ತೇನೆ ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು.
‘ವೀರ ಚಂದ್ರಹಾಸ’ ಯಕ್ಷಗಾನದ ಕತೆ, ಪಾತ್ರಗಳನ್ನು ಹೊಂದಿರುವ ಸಿನಿಮಾ. ರವಿ ಬಸ್ರೂರು ಯಕ್ಷಗಾನದ ಪ್ರಪಂಚದಲ್ಲಿ ನಡೆಯುವ ಕತೆಯನ್ನು ಹರವಿಡಲು ಹೊರಟ್ಟಿದ್ದಾರೆ. 400ಕ್ಕೂ ಅಧಿಕ ಯಕ್ಷಗಾನ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಶಿವಣ್ಣ ಕೂಡ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ.