ಮೈಸೂರು: ನವೆಂಬರ್ ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಈಗಾಗಲೇ ಸದನದಲ್ಲಿ ಹೇಳಿದ್ದೇನೆ. ಸಿಎಂ ಬದಲಾವಣೆ ಆಗೇ ಆಗುತ್ತೆ. ಈಗಾಗಲೇ ಕುರ್ಚಿಗೆ ಕಚ್ಚಾಟ ನಡೆಯುತ್ತಿದೆ. ಇದು ಕೇವಲ ಟ್ರೈಲರ್ ಅಷ್ಟೇ, ಮುಂದಿನ ದಿನಗಳಲ್ಲಿ ಪಿಚ್ಚರ್ ಬರತ್ತೆ ಎಂದು ಹೇಳಿದ್ದಾರೆ.
ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ
ಇನ್ನೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ತುರ್ತು ಪರಿಸ್ಥಿತಿಯ ಪರವೂ ವಿರೋಧವೂ ಎಂದು ತಿಳಿಸಲಿ. ತುರ್ತು ಪರಿಸ್ಥಿತಿಯಲ್ಲಿ ಅಮಾಯಕ ದೇಶ ಪ್ರೇಮಿಗಳು ಸತ್ತಿದ್ದೇಕೆ. ಲಾಟಿ ಚಾರ್ಜ್ ಮಾಡಿದ್ದೆಕೆ ಎಂಬುದಕ್ಕೆ ಕಾಂಗ್ರೆಸ್ ಉತ್ತರವನ್ನೇ ಕೊಟ್ಟಿಲ್ಲ ಎಂದರು.
ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಆಗಿಲ್ಲ, ವಿರೋಧವೂ ಅಥವಾ ಪರವೂ ಎಂಬುದನ್ನು ತಿಳಿಸಲಿ. ಅಘೋಷಿತ ತುರ್ತು ಎಂದರೆ ನಾವೇನು ಚುನಾವಣೆಗೆ ನಿಲ್ಲಬೇಡ ಎಂದು ತಡೆದಿದ್ದೇವಾ.? ನಾನು ಕಾಲೇಜ್ ಸ್ಟೂಡೆಂಟ್ ಆಗಿದ್ದೆ ನನ್ನನ್ನೇಕೆ ಅರೆಸ್ಟ್ ಮಾಡಿದ್ದೂ ಹೇಳಿರಿ ಎಂದು ಪ್ರಶ್ನಿಸಿದ್ದಾರೆ.
ಅಂದು ಪತ್ರಿಕೆಯ ಕಂಟೆಂಟ್ ಬಗ್ಗೆ ಇಂದಿರಾ ತೀರ್ಮಾನ ಮಾಡ್ತಿದ್ರು. ಆದರೆ ಇಂದು ಮೋದಿ ಆ ರೀತಿ ನಡೆದುಕೊಳ್ಳುತ್ತಿದ್ದಾರಾ? ನಿಮ್ಮನ್ನು ಮೋದಿ ತಡೆದಿದ್ದಾರಾ.? ಎಂದು ಮೈಸೂರಿನಲ್ಲಿ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ.