ಬೆಂಗಳೂರು:- ‘ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ!
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಐಪಿಎಲ್ ಟೂರ್ನಿಯಲ್ಲಿ ವಿಜೇತರಾದ ಆರ್ಸಿಬಿ ಆಟಗಾರರಿಗೆ ಸನ್ಮಾನಿಸುವಂಥ ದೊಡ್ಡ ಕಾರ್ಯಕ್ರಮ ಆಯೋಜಿಸುವಾಗ, ಸರ್ಕಾರಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಜವಾಬ್ದಾರಿ ಮರೆತು ವರ್ತಿಸಿದ್ದರಿಂದ ಅಮಾಯಕ 11 ಮಂದಿ ಮೃತಪಟ್ಟಿದ್ದಾರೆ. ಪ್ರತಿ ಕುಟುಂಬದವರಿಗೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.