Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿವಾಹಿತ ಮಹಿಳೆಯೊಂದಿಗೆ ಸಹಜೀವನ, ಕಲಹ : ವಿಡಿಯೋ ಮಾಡಿಟ್ಟು ಆತ್ಮಹತ್ಯೆ

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಕೊಡಗು:   : ಜೊತೆಗಿದ್ದ ಮಹಿಳೆಯೊಂದಿಗೆ ಕಲಹ ಏರ್ಪಟ್ಟ ಹಿನ್ನೆಲೆ ಯುವಕ ವೀಡಿಯೋ ಮಾಡಿ ನೇಣಿಗೆ ಶರಣಾದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ನಡೆದಿದೆ. ಕೆ. ಬೋಯಿಕೇರಿ ಮೂಲದ ಚೆಸ್ಕಾಂನಲ್ಲಿ ಕಂಬ ಅಳವಡಿಸುವ ಕೆಲಸ ಮಾಡುತ್ತಿದ್ದ ಸಾಗರ್ (30) ಮೃತ  ದುರ್ದೈವಿಯಾಗಿದ್ದಾನೆ.

    ಚೆಸ್ಕಾಂನಲ್ಲಿ ಕೆಲಸ ಮಾಡುವುದರ ಜೊತೆಗೆ ಆಟೋ ಚಾಲನೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಸಾಗರ್ ಕಳೆದ 8 ವರ್ಷಗಳಿಂದ ವಿವಾಹಿತ ಮಹಿಳೆಯೊಂದಿಗೆ ಜೀವನ ನಡೆಸುತ್ತಿದ್ದ. ಎರಡು ದಿನಗಳ ಹಿಂದೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಕಲಹ ಏರ್ಪಟ್ಟಿದೆ. ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ತೆರಳಿ ಹಿಂದಿರುಗಿದ ಸಾಗರ್ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಮನೆಗೆ ಬಂದು ಮಹಿಳೆಗೆ ಕರೆ ಮಾಡಿದ್ದಾನೆ. ಆದರೆ, ಪ್ರತಿಕ್ರಿಯೆ ಬಾರದ ಹಿನ್ನೆಲೆ ನೊಂದು ಮೊಬೈಲ್‌ನಲ್ಲಿ ವಿಡಿಯೋ ಚಿತ್ರಿಸಿಕೊಂಡು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಇಬ್ಬರ ನಡುವಿನ ಕಲಹದಲ್ಲಿ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆಕೆಯ ಮಗ ಆಧಾರ್ ಕಾರ್ಡ್ ತರಲೆಂದು ಮನೆಗೆ ಬಂದು ನೋಡಿದ ಸಂದರ್ಭ ಸಾಗರ್ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

    ಮೃತನ ತಾಯಿ ಎನ್.ಎನ್. ಸರೋಜ ಅವರು ನೀಡಿರುವ ದೂರಿನ ಅನ್ವಯ ವೀರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತನ ಕುಟುಂಬ ವರ್ಗಕ್ಕೆ ಹಸ್ತಾಂತರ ಮಾಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಎರಡು ಬಸ್‌ಗಳ ಮಧ್ಯೆ ಅಪಘಾತ; ಚಾಲಕರಿಗೆ ಸನ್ಮಾನ ಮಾಡಿದ ಅಧಿಕಾರಿಗಳು

    July 4, 2025

    ಕೊಡಗಿನಲ್ಲಿ ಮತ್ತೆ ರೆಟ್ ಅಲರ್ಟ್ ಘೋಷಣೆ

    July 3, 2025

    ಆನ್ ಲೈನ್ ಗೇಮ್ ಗೆ ಯುವಕ ಬಲಿ;ಡೆತ್ ನೋಟ್‌ನಲ್ಲಿ ಹೇಳಿದ್ದೇನು..?

    July 3, 2025

    ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ

    July 3, 2025

    ಬಾಗಲಕೋಟೆಯಲ್ಲಿನ ಕುಟುಂಬದಲ್ಲಿ ಏಳು ಮಂದಿಗೆ ಹೃದಯಾಘಾತ

    July 3, 2025

    ಸಿದ್ದರಾಮಯ್ಯರಿಂದ ಅವಮಾನಿತರಾಗಿ ಮನನೊಂದು ರಾಜೀನಾಮೆ ಸಲ್ಲಿಸಿದ ASP ಪತ್ರ ವೈರಲ್!

    July 3, 2025

    ಜಿಲ್ಲಾಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೌಕರ

    July 3, 2025

    ಪಾಠ ಕೇಳುತ್ತಿದ್ದಾಗಲೇ ಫಿಟ್ಸ್ ಬಂದು ವಿದ್ಯಾರ್ಥಿ ಸಾವು; ವಿದ್ಯಾರ್ಥಿಗಳಲ್ಲಿ ಭಯ

    July 3, 2025

    ಎನ್ ಓಸಿ ಕೊಡುವಂತೆ ಕೇಳಿದ್ದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಓ; ವಿಡಿಯೋ ವೈರಲ್

    July 3, 2025

    ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಸರಣಿ; ಮೃತರ ಮನೆಗೆ ಅಧ್ಯಯನ ತಂಡ ಭೇಟಿ

    July 3, 2025

    ಹುಬ್ಬಳ್ಳಿ| ಎ. ಎಂ. ಹಿಂಡಸಗೇರಗೆ ರಿಯಾಲಿಟಿ ಬುಕ್ ಆಫ್ ಓಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರಧಾನ!

    July 3, 2025

    ಹೃದಯಾಘಾತ: ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕ ಸಾವು!

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.