ರಾಯಚೂರು : ರಾಯಚೂರಿನಲ್ಲಿ ಅಂಗನವಾಡಿ ಮಕ್ಕಳ ಮೊಟ್ಟೆ ಹಣದಲ್ಲಿ ಕಮಿಷನ್ ದಂಧೆ ನಡೆಯುತ್ತಿರುವ ಬೆಳಕಿಗೆ ಬಂದಿದೆ. ನಿಯಮ ಉಲ್ಲಂಘಿಸಿ ಹಣ ವರ್ಗಾವಣೆ ಮಾಡಿದ್ದು, ಬಳಿಕ ಮೇಲ್ವೀಚಾರಕಿ ಮೂಲಕ ಹಣ ವಸೂಲಿ ಮಾಡಿರುವ ಘಟನೆ ವದುರ್ಗ ಪಟ್ಟಣದಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಅಂಗನವಾಡಿ ಕಾರ್ಯಕರ್ತೆಯರಿಂದ ಮೊಟ್ಟೆ ಹಣದಲ್ಲಿ 50 % ಕಮಿಷನ್ ವಿಡಿಯೋ ವೈರಲ್ ಆಗಿದ್ದು, ಮೇಲ್ವೀಚಾರಕಿ ಕಮಲಾಕ್ಷಿ ವಿರುದ್ಧ ಹಣ ವಸೂಲಿ ಆರೋಪ ಕೇಳಿ ಬಂದಿದೆ.
ಸಾಮಾಜಿಕ ಕಾರ್ಯಕರ್ತೆ ಜುಬೇದಾ ನಧಾಫ್ ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಕಮಲಾಕ್ಷಿ, ದೇವದುರ್ಗ ತಾಲ್ಲೂಕಿನ ಮಸರಕಲ್ ವಲಯದ ಮೇಲ್ವೀಚಾರಕಿಯಾಗಿದ್ದು, ಈಕೆ ದೇವದುರ್ಗ ಮಾಜಿ ಸಚಿವ ಕೆ ಶಿವನಗೌಡ ನಾಯಕ್ ಸಹೋದರಿ ಕೂಡ ಹೌದು. ಸಮಿತಿ ಮೂಲಕ ಮೊಟ್ಟೆ ಖರೀದಿಸೋದು ನಿಯಮವಾಗಿದೆ. ಆದರೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸುತ್ತೋಲೆಯ ನಿಯಮ ಉಲ್ಲಂಘನೆ ಮಾಡಿದ್ದಾರೆ. ಬಾಲ ವಿಕಾಸ ಸಮಿತಿಗೆ ಹಣ ಹಾಕದೇ ನೇರವಾಗಿ ಕಾರ್ಯಕರ್ತೆಯರಿಗೆ ಹಣ ವರ್ಗಾವಣೆ ಮಾಡಲಾಗಿದೆ.