ಬೆಂಗಳೂರು:- ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
IPL 2025: ಹಿಟ್ ಮ್ಯಾನ್ ಮೇಲೆ ಅಂಬಾನಿ ಪತ್ನಿ ಫುಲ್ ಫೈರ್..! ಯಾಕೆ ಗೊತ್ತಾ..?
ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ನಿಂದ ರಾಜ್ಯಾದ್ಯಂತ ಶೀಘ್ರವೇ ಉಗ್ರ ಹೋರಾಟ ಮಾಡಲಾಗತ್ತೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷ ಕಳೆದಿದೆ. ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಜನ ಸಾಮಾನ್ಯರ ಮೇಲೆ ಸರ್ಕಾರ ಬೆಲೆ ಏರಿಕೆಯ ಹೊರೆಹಾಕಿದ್ದಾರೆ. ಬೆಲೆ ಏರಿಕೆ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಸಕ್ಕೂ ಟ್ಯಾಕ್ಸ್ ಹಾಕುತ್ತಿದ್ದಾರೆ. ಮೆಟ್ರೋ, ಹಾಲು, ನೀರು, ಪೆಟ್ರೋಲ್, ಡಿಸೇಲ್ ಸೇರಿ ಎಲ್ಲಾ ಬೆಲೆ ಏರಿಕೆ ಆಗಿದೆ. ಇದನ್ನು ಖಂಡಿಸಿ ಜೆಡಿಎಸ್ ಪಕ್ಷ ಉಗ್ರ ಪ್ರತಿಭಟನೆ ಮಾಡುತ್ತದೆ. ಈ ವಾರದಲ್ಲಿ ಶಾಸಕರು, ಪದಾಧಿಕಾರಿಗಳು ಸಭೆ ಮಾಡಿ, ಹೋರಾಟದ ರೂಪುರೇಷೆ ಸಿದ್ದತೆ ಮಾಡುವುದಾಗಿ ತಿಳಿಸಿದರು.
ಬಿಜೆಪಿ ಮಾಡುತ್ತಿರುವ ಹೋರಾಟದಲ್ಲಿ ಜೆಡಿಎಸ್ ಭಾಗಿಯಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ಮಾಡುತ್ತಿದೆ. ಅಹೋರಾತ್ರಿ ಧರಣಿ ಜೊತೆಗೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಮಿತ್ರ ಪಕ್ಷವಾಗಿ ಸದನದ ಒಳಗೆ, ಹೊರಗೆ ನಾವು ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅವರು ತನ್ನದೇ ಹೋರಾಟವನ್ನು ಮಾಡ್ತಿದ್ದಾರೆ. ಜೆಡಿಎಸ್ ಕೂಡಾ ಬೆಲೆ ಏರಿಕೆ ಬಗ್ಗೆ ಶೀಘ್ರವೇ ಹೋರಾಟ ಮಾಡುತ್ತದೆ ಅಂದರು.