ಬೆಂಗಳೂರು: ಅಬಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ನಿಂಗಪ್ಪನೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ಶ್ರೀನಾಥ್ ಮಹದೇವ ಜೋಶಿ ಅವರಿಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಗಳಿಗೆ ಅರ್ಜಿ ಮೇಲೆ ಅರ್ಜಿ ಹಾಕಿದ್ದಾರೆ.
ಹೌದು ಒಂದೆಡೆ ನಿರೀಕ್ಷಣಾ ಜಾಮೀನಿಗೆ ಅರ್ಜಿ.. ಮತ್ತೊಂದೆ ಕಾನೂನಿನ ರಕ್ಷಣೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ಕೋರ್ಟ್ ಮೊರೆ ಹೋಗಿದ್ದು, ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಶಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ನ್ಯಾಯಾಲಯದಲ್ಲಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?
ಸುಲಿಗೆ ಕೃತ್ಯದಲ್ಲಿ ಬಂಧಿತನಾಗಿರುವ ಚಿತ್ರದುರ್ಗದ ಮಾಜಿ ಹೆಡ್ಕಾನ್ಸ್ಟೆಬಲ್ ಜಿ ನಿಂಗಪ್ಪ ಅಲಿಯಾಸ್ ನಿಂಗಪ್ಪ ಸಾವಂತನ ಮೊಬೈಲ್ ಪರಿಶೀಲನೆ ವೇಳೆ ಬೆಂಗಳೂರು ಲೋಕಾಯುಕ್ತ ಘಟಕದ ಎಸ್ಪಿ-1 ಆಗಿದ್ದ ಶ್ರೀನಾಥ್ ಜೋಶಿ ಸಂಪರ್ಕ ಇರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೇ ಶ್ರೀನಾಥ ಜೋಶಿ ಅವರನ್ನು ಲೋಕಾಯುಕ್ತ ಸೇವೆಯಿಂದ ಜೂನ್ 11ರಂದು ಬಿಡುಗಡೆಗೊಳಿಸಲಾಗಿತ್ತು.
ನಿಂಗಪ್ಪ ಹಾಗೂ ಜೋಶಿ ನಡುವಣ ನಂಟು ಭೇದಿಸುವ ಸಲುವಾಗಿ ಎರಡು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸರು, ಕೋರಮಂಗಲದಲ್ಲಿರುವ ಜೋಶಿ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು.