ಬೆಂಗಳೂರು:- ಹಿರಿಯ ಕಾಂಗ್ರೆಸ್ ಮುಖಂಡ ಬಿ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಬಿ ಆರ್ ಪಾಟೀಲ್ ಅವರು ಚರ್ಚೆ ನಡೆಸಿದರು. ಇದೇ ವೇಳೆ ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ.. ಆದರೆ: ಚಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?
ಇನ್ನೂ ವಸತಿ ಯೋಜನೆ ಮನೆಗಳನ್ನು ಹಂಚಲು ಲಂಚ ಸ್ವೀಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಮಾಡಿರುವ ಆರೋಪ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಆಡಿಯೋ ಆಡಳಿತರೂಢ ಕಾಂಗ್ರೆಸ್ ಸರ್ಕಾರ ತೀವ್ರ ಮುಜುಗರ ಉಂಟಾಗುವಂತೆ ಮಾಡಿದೆ. ಅಲ್ಲದೇ, ಈ ಆಡಿಯೋ ವಿಪಕ್ಷ ನಾಯಕರಿಗೆ ಅಸ್ತ್ರವಾಗಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ DCM ಡಿಕೆಶಿ ಅವರನ್ನು ಬಿ. ಆರ್ ಪಾಟೀಲ್ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಹಾಗೂ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಡಿಸಿಎಂ ಗಮನಕ್ಕೆ ಶಾಸಕರು ತಂದಿದ್ದಾರೆ ಎನ್ನಲಾಗಿದೆ. ಈ ವೇಳೆ ಮಾಧ್ಯಮದ ಮುಂದೆ ಬಹಿರಂಗ ಹೇಳಿಕೆ ಕೊಡದಂತೆ ಡಿಸಿಎಂ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.