ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಜಾತಿಗಣತಿ ವರದಿ ಸ್ವೀಕಾರ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲು ಕೌಂಟ್ ಡೌನ್ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿದ್ದು ಸಂಪುಟ ಸಭೆ ನಡೀತಿದೆ. ಇನ್ನು ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿ ಅಂದರೆ ಜಾತಿ ಗಣತಿ ವರದಿಯ ಪ್ರತಿಗಳು ವಿಧಾನಸೌಧಕ್ಕೆ ಆಗಮಿಸಿವೆ. ಮುಚ್ಚಿದ ಲಕೋಟೆಯಲ್ಲಿ ವಿಧಾನಸೌಧಕ್ಕೆ ಜಾತಿಗಣತಿ ವರದಿಯನ್ನು ತರಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವರದಿ ತಯಾರಿಸಲಾಗಿದ್ದು ಸಚಿವ ಸಂಪುಟದ ಕೊಠಡಿಗೆ ತೆಗೆದುಕೊಂಡು ಹೋಗಲಾಗಿದೆ.