ಬಾಗಲಕೋಟೆ : ದಿನೇ ದಿನೇ ಹೆಚ್ಚಿದ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ನದಿಯಿಂದ ಬೃಹದಾಕಾರದ ಮೊಸಳೆಗಳು ನದಿಯಿಂದ ಹೊರ ಬರುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರ ಆತಂಕ ಹೆಚ್ಚಿಸಿದೆ.
ಕೃಷ್ಣಾ ನದಿಯಲ್ಲಿ ನೀರು ವಿರಳವಾಗುತ್ತಿದ್ದಂತೆ ಬೃಹತ್ ಮೊಸಳೆ ಪ್ರತ್ಯಕ್ಷವಾಗಿವೆ, ಬಾಗಲಕೋಟೆ ಜಿಲ್ಲೆಯ ಗಲಗಲಿ ಸಮೀಪದ ರಬಕವಿಯಲ್ಲಿ ಮೊಸಳೆ ಪ್ರತ್ಯಕ್ಷಗೊಂಡಿದೆ. ಗ್ರಾಮದ ಸುರೇಶ ಗುಮ್ಮಡಿ ಎಂಬುವವರ ಹೊಲದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಸ್ಥಳೀಯರ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆ ಸೆರೆ ಹಿಡಿದಿದ್ದಾರೆ. ಸೆರೆ ಹಿಡಿದ ಮೊಸಳೆಯನ್ನ ನದಿಗೆ ಬಿಟ್ಟಿದ್ದಾರೆ.
ಕೃಷ್ಣಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಬೃಹತ್ ಪಾದಯಾತ್ರೆ
ನದಿ ತೀರದ ಹೊಲಗದ್ದೆಗಳ ರೈತರಿಗೆ ದಿನೇ ದಿನೇ ಆತಂಕ ಹೆಚ್ಚಾಗುತ್ತಿದ್ದು, ಮೊಸಳೆಗಳ ಬಗ್ಗೆ ಎಚ್ಚರಿಕೆಯಿಂದಿರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.