ಬೆಂಗಳೂರು: ಆನ್ಲೈನ್ ವಂಚನೆ ಎನ್ನುವುದು ಕಣ್ಣಿಗೆ ಕಾಣದಂತೆ ನಡೆಯುವ ದಂಧೆ ಆಗಿದೆ. ಕ್ಷಣದಲ್ಲಿ ಹಣವನ್ನು ಮಾಯ ಮಾಡಿ ಬಿಡುತ್ತಾರೆ. ಉದ್ಯೋಗ ಕೊಡುತ್ತೇವೆ, ಹಣ ಡಬಲ್ ಮಾಡಿಕೊಡುತ್ತೇವೆ. ಕಸ್ಟಮರ್ ಅಧಿಕಾರ ಹೆಸರಲ್ಲಿ, ನಿಮ್ಮ ಹೆಸರಲ್ಲಿ ಕೇಸ್ಗಳಿವೆ, ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿ ಹೀಗೆ.. ಹಲವಾರು ರೀತಿಯಲ್ಲಿ ಖದೀಮರು ಆನ್ಲೈನ್ ಮೂಲಕ ವಂಚನೆ ಮಾಡುತ್ತಾರೆ. ಈ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ.
ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ.
ಹೌದು! ಸೈಬರ್ ಖದೀಮರು ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರಿದ್ದಾರೆ. ಹಿಂದಿ ಭಾಷೆಯಲ್ಲಿ ಅಕೌಂಟ್ ಓಪನ್ ಮಾಡಿರುವ ಖದೀಮರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ.