ಮಡಿಕೇರಿ: ವಿಶ್ವಾದ್ಯಂತ ಸೈಬರ್ ಅಪರಾಧಗಳು ಹೆಚ್ಚಾಗಿವೆ. ಭಾರತ ಇದರಿಂದ ಹೊರತಾಗಿಲ್ಲ. ಸೈಬರ್ ಅಪರಾಧವು ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಜನರಿಗೆ ಸಾಕಷ್ಟು ನಷ್ಟವನ್ನು ಉಂಟುಮಾಡುತ್ತದೆ. ಇದೀಗ ವ್ಯಕ್ತಿಯೊಬ್ಬರಿಗೆ ಸೈಬರ್ ಪೊಲೀಸರೆಂದು ಹೇಳಿ ಕ್ ಮೇಲ್ ಮಾಡಿ ಅಂದಾಜು 7 ಲಕ್ಷ ವಸೂಲಿ ಮಾಡಿರುವ
ಆರೋಪಿಗಳನ್ನು ಕುಶಾಲನಗರ ಟೌನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇಬ್ರಾಹಿಂ ಬಾದುಷಾ (25), ರಾಘವೇಂದ್ರ ಬಿ.ಎಂ. (19), ಚರಣ್ ಸಿ.ಕೆ. (19) ಬಂಧಿತ ಆರೋಪಿಗಳಾಗಿದ್ದು, ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಫೇಸ್ಬುಕ್ನಲ್ಲಿ ವ್ಯಕ್ತಿಯೊಬ್ಬರಿಗೆ ಮೆಸೇಜ್ ಮಾಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ಪರಶಿವಮೂರ್ತಿ ಅವರ ಮೊಬೈಲ್ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು,
Green Tea: ರಾತ್ರಿ ಮಲಗುವ ಮುನ್ನ ಗ್ರೀನ್ ಟೀ ಕುಡಿಯುವುದು ಒಳ್ಳೆಯದಾ? ಇಲ್ಲಿದೆ ನೋಡಿ ಉತ್ತರ
ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಾಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿದೆ. ನೀವು ಹಣ ನೀಡಿದ್ರೆ ಸರಿ ಮಾಡುತ್ತೇನೆ. ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕಪಕ್ಕದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ.
ಹೀಗೆ ಪರಶಿವಮೂರ್ತಿ ಅವರ ಮೊಬೈಲ್ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಹಂತಹಂತವಾಗಿ ಸುಮಾರು 7 ಲಕ್ಷ ರೂ. ಪಡೆದಿದ್ದ. ಇದರಿಂದ ರೋಸಿಹೋಗಿದ್ದ ಪರಶಿವಮೂರ್ತಿ 2025ರ ಜನವರಿ 11ರಂದು ದೂರು ನೀಡಿದ್ದರು. ಈ ಸಂಬಂಧ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಯನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಜೂನ್ 24ರಂದು ಐವರನ್ನು ಬಂಧಿಸಿದೆ.