ಬೆಂಗಳೂರು:- ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗೆ ಕೊಡಲಿ ಪೆಟ್ಟು ಬೀಳುತ್ತಿರುವುದು ಆತಂಕದ ವಿಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಯ ರಿವೇಂಜ್ ಮರ್ಡರ್ ಸ್ಥಿತಿಯ ಬಗ್ಗೆ ತಿಳಿಯಲು ಕಾಂಗ್ರೆಸ್ ಪಕ್ಷದ ವತಿಯಿಂದಲೇ ಪ್ರತ್ಯೇಕ ತಂಡ ಕಳುಹಿಸಿ ಕೊಡಲಾಗುತ್ತದೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಗೆ, ನಾನು ಪಕ್ಷದ ವತಿಯಿಂದ ಒಂದು ಪ್ರತ್ಯೇಕ ಟೀಮ್ ಕಳುಹಿಸುತ್ತೇವೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ. ಎಲ್ಲಾ ಸಮಾಜದ ರಕ್ಷಣೆ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅವನ್ನೆಲ್ಲ ತೆಗೆದುಕೊಳ್ಳುತ್ತೇವೆ. ಒಂದು ಟೀಮ್ ಕಳಿಸಲು ವ್ಯವಸ್ಥೆ ಮಾಡ್ತಿದ್ದೇನೆ. ಅಲ್ಲಿ ಶಾಂತಿ ನೆಲೆಸಬೇಕು. ಒಂದು ಸಾವು, ಎರಡು ಸಾವು ಅಂತಲ್ಲ. ಇಡೀ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಇದು ಕೊಡಲಿ ಪೆಟ್ಟು ಬೀಳುತ್ತಿದೆ ಇದು ಆತಂಕದ ವಿಚಾರ ಎಂದಿದ್ದಾರೆ.