Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡೇಂಜರ್, ಡೇಂಜರ್, ಡೇಂಜರ್: ಸೇಫ್ ಅಲ್ಲ ವಾಟರ್ ಬಾಟಲ್! ಶಾಕಿಂಗ್ ಮ್ಯಾಟರ್ ಲೀಕ್!

    By AIN AuthorApril 8, 2025
    Share
    Facebook Twitter LinkedIn Pinterest Email
    Demo

    ಡೇಂಜರ್, ಡೇಂಜರ್, ಡೇಂಜರ್.. ಸೇಫ್ ಅಲ್ಲ ಜನರೇ ವಾಟರ್ ಬಾಟಲ್. ಹಿಂದೆಲ್ಲಾ ಪನ್ನೀರ್, ಗೋಬಿ, ಕಬಾಬ್, ಕಲ್ಲಂಗಡಿ ಬಳಿಕ ಈಗ ಕುಡಿಯುವ ನೀರಿಗೂ ಕಂಟಕ ಶುರುವಾಗಿದೆ. ಬೇಸಿಗೆ ಶುರುವಾಯ್ತು ನೀರಿನ ಸಮಸ್ಯೆ ಸಾಮಾನ್ಯ ಬಿಡಿ ಅಂತ ಮುಂದೆ ಓದದೆ ಸುಮ್ಮನಾಗಬೇಡಿ. ನೀವು ಈ ಸುದ್ದಿ ಏದಲೇಬೇಕು.

    ರೀಲ್ಸ್ ಸ್ಟಾರ್ಸ್‌ಗೆ ಖಾಕಿ ಬಿಸಿ..ಸೋನು ಗೌಡ ಸೇರಿದಂತೆ 100 ಮಂದಿಯನ್ನು ಬೆಂಡೆತ್ತಿದ ಪೊಲೀಸರು!

    ಎಸ್, ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಈಗ ವಾಟರ್ ಬಾಟಲ್ ಸರದಿ.

    ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ವರದಿ ತಿಳಿಸಿದೆ. ಜತೆಗೆ, ಕೋವಾ ಕೂಡ ಕಲಬೆರಕೆಯುಕ್ತ ಎಂದು ತಿಳಿಸಿದೆ.

    ನಕಲಿ ವಾಟರ್ ಬಾಟಲ್ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಆಹಾರ ಇಲಾಖೆ ಸಮರ ಮುಂದುವರಿಸಿದೆ. ವಿವಿಧೆಡೆ ದಾಳಿ ನಡೆಸಿ ವಾಟರ್ ಬಾಟಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

    ಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕೂಡ ಕಲಬೆರಕೆ ಪತ್ತೆಯಾಗಿರುವುದಾಗಿ ಆಹಾರ ಇಲಾಖೆಯ ಪರೀಕ್ಷೆಯ ವರದಿ ತಿಳಿಸಿದೆ. ಇದರೊಂದಿಗೆ ಪನೀರ್ ನಂತರ ಇದೀಗ ಕೋವಾ ಕೂಡ ಆರೋಗ್ಯಕ್ಕೆ ಮಾರಕ ಎಂಬುದು ಬೆಳಕಿಗೆ ಬಂದಂತಾಗಿದೆ.

    ಮತ್ತೊಂದೆಡೆ, ಈಗಾಗಲೇ ಪನೀರ್ ಮತ್ತು ಐಸ್ ಕ್ರೀಮ್ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿರುವ ಆಹಾರ ಇಲಾಖೆ ಇದೀಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಮುಂದುವರಿಸಿದೆ. ಬೆಂಗಳೂರಿನ ವಿವಿಧ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪನೀರ್ ಹಾಗೂ ಐಸ್ ಕ್ರೀಮ್ ಗಳಲ್ಲಿ ರಾಸಾಯನಿಕ ಬಳಕೆ ಆರೋಪದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ.

    ಇಡ್ಲಿ, ಗೋಬಿ ಸೇರಿದಂತೆ ಅನೇಕ‌ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಜತೆಗೆ, ಆಹಾರಗಳ ತಯಾರಿ ಹಾಗೂ ಮಾರಾಟ ಸಂಬಂಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ ನೀರು ಸುರಕ್ಷಿತವೇ ಎಂಬ ಬಗ್ಗೆ ಪರಿಶೀಲನೆಗೆ ಮುಂದಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಆಘಾತಕಾರಿ ವಿಚಾರ ಬಯಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ನಿತ್ಯ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

    July 1, 2025

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಕರಿಬೇವು ಒಗ್ಗರಣೆಗೆ ಮಾತ್ರವಲ್ಲ ಹಲವಾರು ರೀತಿಯ ಆರೋಗ್ಯ ಪ್ರಯೋಜನ ನೀಡುತ್ತೆ!

    July 1, 2025

    ಸೊಂಟದವರೆಗೂ ಕೂದಲು ಬೆಳೆಯಬೇಕಾ? ಹಾಗಿದ್ರೆ ಈರುಳ್ಳಿ ರಸದ ಜೊತೆ ಇದನ್ನು ಬೆರಸಿ ಹಚ್ಚಿ!

    July 1, 2025

    ಸ್ಟ್ರಾಬೆರಿ ಹಣ್ಣನ್ನು ಡಯಾಬಿಟಿಸ್ ಇರುವವರು ತಿನ್ನಬಹುದಾ?

    July 1, 2025

    ನಿಮ್ಮದು ಬೋಳು ತಲೆಯೇ? ಹಾಗಿದ್ರೆ ಶುಂಠಿಯನ್ನು ಈ ರೀತಿ ಬಳಸಿ.. ಕೂದಲು ಬೆಳೆಯೋದು ಗ್ಯಾರಂಟಿ!

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.