Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭದ್ರಾ ಬಲದಂಡೆ ನಾಲೆ ಕೊನೆ ಭಾಗದ ರೈತರ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಕಾರಾತ್ಮಕ ಸ್ಪಂದನೆ!

    By AIN AuthorJuly 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು-ಭದ್ರಾ ಬಲದಂಡೆ ಕಾಲುವೆಯಿಂದ ಅವೈಜ್ಞಾನಿಕವಾಗಿ ನೀರನ್ನು ಎತ್ತಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೆ ನೀರು ನೀಡಲು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ನಿರ್ಧಾರ ಕೈಬಿಡಬೇಕು ಎಂದು ನಾಲೆಯ ಕೊನೆ ಭಾಗದ ರೈತರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ರೈತರ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

    ಬೆಂಗಳೂರಿನ ಕುಮಾರಪಾರ್ಕ್ ಸರಕಾರಿ ನಿವಾಸದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ರೈತರ ನಿಯೋಗವು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

    “ಕಳೆದ ಸರ್ಕಾರದ ಅವಧಿಯಲ್ಲಿ ದಿನಾಂಕ 9-11-2020ರಂದು ಆಗಿನ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಲಸಂಪನ್ಮೂಲ ಇಲಾಖೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭದ್ರಾ ಕಾಲುವೆ ಬಲದಂಡೆ 250 ಮೀಟರ್ ನಲ್ಲಿ ಚಾನೆಲ್ ಸೀಳಿ ಚಿತ್ರದುರ್ಗ ಜಿಲ್ಲೆಯ ಕೆಲವು ಪಟ್ಟಣ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಗ್ರಾಮಗಳಿಗೆ ಕುಡಿಯುವ ನೀರು ನೀಡಲು ತೀರ್ಮಾನಿಸಲಾಗಿದೆ. ಅವೈಜ್ಞಾನಿಕವಾಗಿ ತೆಗೆದುಕೊಂಡಿರುವ ತೀರ್ಮಾನವನ್ನು ನಾವು ವಿರೋಧಿಸುತ್ತೇವೆ” ಎಂದು ರೈತರು ತಿಳಿಸಿದರು.

    “ಈ ಭಾಗಕ್ಕೆ ಕುಡಿಯಲು ನೀರು ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಚಾನೆಲ್ ಸೀಳಿ ನೀರನ್ನು ಎತ್ತುವುದರಿಂದ ಭದ್ರಾ ಬಲದಂಡೆ ನಾಲೆಯ ಕೊನೆ ಭಾಗಕ್ಕೆ ನೀರು ತಲುಪದೇ ರೈತರಿಗೆ ಅನಾನುಕೂಲವಾಗಲಿದೆ. ಹೀಗಾಗಿ ಕೈಗೊಂಡಿರುವ ಈ ತೀರ್ಮಾನವನ್ನು ಕೈಬಿಡಬೇಕು. 365 ದಿನವೂ ನೀರು ಹರಿಯುವ ನದಿ ಭಾಗದಲ್ಲಿ ಜಾಕ್ ವೆಲ್ ನಿರ್ಮಿಸಿ ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು” ಎಂದು ಮನವಿ ಮಾಡಿದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಇದು ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡಿರುವ ತೀರ್ಮಾನ. ಈ ಬಗ್ಗೆ ನನಗೆ ಈಗಷ್ಟೇ ನಿಮ್ಮ ಮೂಲಕ ನನ್ನ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ‘ಸ್ಟಿಕರ್ ವಿವಾದ’: ಇದು ಸಮೀಕ್ಷಾ ಪ್ರಕ್ರಿಯೆಯ ಭಾಗ ಎಂದ ಬಿಬಿಎಂಪಿ!

    July 3, 2025

    ಕರುನಾಡು ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ!

    July 3, 2025

    ವರುಣಾರ್ಭಟ: ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ!

    July 3, 2025

    ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    July 2, 2025

    ಪೋಷಕರೇ ನಿಮ್ಮ ಮಗುವಿಗೆ ಈ ಫುಡ್ ಕೊಡ್ತಿದ್ರೆ ಮಿಸ್ ಮಾಡ್ದೇ ಸುದ್ದಿ ಓದಿ!

    July 2, 2025

    ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ: ಸಿದ್ದರಾಮಯ್ಯ ಘೋಷಣೆ!

    July 2, 2025

    ಟಾಯ್ಲೆಟ್ ನಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡ್ತಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್!

    July 2, 2025

    TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್‌ನ ಮೊದಲ ಹೆಜ್ಜೆ !

    July 2, 2025

    ಹೆಚ್ಚುತ್ತಿರುವ ಹೃದಯಾಘಾತ: ಕೇವಲ ಹಾಸನ ಜಿಲ್ಲೆಗೆ ಮಾತ್ರ ಲಸಿಕೆ ನೀಡಿದ್ರಾ..? ಬಿ.ವೈ. ವಿಜಯೇಂದ್ರ ಪ್ರಶ್ನೆ

    July 2, 2025

    ವಾಲ್ಮೀಕಿ ಹಗರಣ ತನಿಖೆ CBIಗೆ: ಮುಂದೆ ದೊಡ್ಡ ತಲೆಗಳು ಉರುಳಲಿವೆ ಎಂದ ಬಿ.ವೈ. ವಿಜಯೇಂದ್ರ!

    July 2, 2025

    ಬೆಂಗಳೂರು -ತುಮಕೂರು ಮಧ್ಯೆ ಮೆಟ್ರೋ ಬೇಕು. ಅದಕ್ಕೆ ನಮ್ಮ ಒತ್ತಾಯವಿದೆ: ಡಾ.ಜಿ.ಪರಮೇಶ್ವರ್

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.