ಬೆಂಗಳೂರು: ಗುಜರಾತಿನ ಅಹಮದಾಬಾದಿನಲ್ಲಿ ಇಂದು ನಡೆಯುವ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ವಿರಾಟ್ ಕೊಹ್ಲಿಯ ಸುಮಾರು ಎರಡು ದಶಕಗಳ ಸುಧೀರ್ಘ ಕಾಯುವಿಕೆಗೆ ಮುಕ್ತಿ ಸಿಗಲಿ ಎಂಬುದು ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ, ಕನಸು ಹಾಗೂ ಹಾರೈಕೆಯಾಗಿದೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಇನ್ನೂ ಆರ್ಸಿಬಿ ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆರ್ಸಿಬಿ ತಂಡದ ಜೆರ್ಸಿ ಧರಿಸಿ ಮಾತನಾಡಿದ್ದು, ಇಂತಹ ಅದ್ಭುತ ದಿನಕ್ಕಾಗಿ ಕಳೆದ 18 ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದೇವೆ.
ಟ್ರೋಫಿಗಾಗಿ ಸಾಕಷ್ಟು ಶ್ರಮ ಪಟ್ಟು ಆರ್ಸಿಬಿ ಕೊನೆಗೆ ಐಪಿಎಲ್ನಲ್ಲಿ ಫೈನಲ್ ತಲುಪಿದೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಖಾಡಕ್ಕೆ ಇಳಿಯುತ್ತಿದೆ. ಇಡೀ ರಾಜ್ಯವೆಲ್ಲಾ ಟ್ರೋಫಿ ಗೆದ್ದು ಬರಲಿ ಎಂದು ಆರ್ಸಿಬಿ ತಂಡದ ಹಿಂದೆ ನಿಂತಿದೆ. ಆ ಅದ್ಭುತ ಕ್ಷಣವನ್ನು ಸಾಧಿಸಿ ತೋರಿಸಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.