Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸತ್ತವಳು 5 ವರ್ಷದ ಬಳಿಕ ಬದುಕಿ ಬಂದಳು ; ಪತ್ನಿಯ ಹತ್ಯೆ ಆರೋಪದಡಿ ಶಿಕ್ಷೆ ಅನುಭವಿಸಿದ ಪತಿಗೆ ಶಾಕ್

    By Author AINApril 3, 2025
    Share
    Facebook Twitter LinkedIn Pinterest Email
    Demo

    ಸತ್ತವಳು 5 ವರ್ಷದ ಬಳಿಕ ಬದುಕಿ ಬಂದಳು ; ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌

     

    ಮಡಿಕೇರಿ: ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಶಿಕ್ಷೆಯನ್ನು ಅನುಭವಿಸಿದ್ದ. ಆದರೆ ಇದೀಗ ಆತನಿಗೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ.. ಅದೂ ಕೂಡ ಲವರ್​ ಜೊತೆ..

     

    ಇದು ಸಿನಿಮಾ ಕಥೆಯಲ್ಲ ಖಂಡಿತಾ ಅಲ್ಲ. ಕೊಡಿಗನಲ್ಲಿ ಮಲ್ಲಿಗೆ ಎಂಬ ಮಹಿಳೆಯ ಕಥೆ. ಹೌದು. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಕೊಲೆ ಪ್ರಕರಣವೊಂದಕ್ಕೆ ಇದೀಗ ಊಹಿಸಲಾಗದ ತಿರುವು ಸಿಕ್ಕಿದೆ. ಅಷ್ಟೇ ಅಲ್ಲ, ಯಾವ ಸಸ್ಪೆನ್ಸ್​, ಹಾರರ್, ಥ್ರಿಲ್ಲರ್, ರೊಮ್ಯಾಂಟಿಕ್ ಸಿನಿಮಾಗೂ ಕಡಿಮೆ ಇಲ್ಲ ಅನ್ನೋ ರೀತಿಯಲ್ಲಿ ಅನಾವರಣಗೊಂಡಿದೆ.

    ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲೇ ಸಪ್ತಪದಿ ತುಳಿದ ಲವ್ ಬರ್ಡ್ಸ್

    ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಲಿಗೆ

    ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಯುವಕ ಸುಮಾರು 18 ವರ್ಷಗಳ ಹಿಂದೆ ಮಲ್ಲಿಗೆ ಎಂಬಾಕೆಯನ್ನು ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳೂ ಇದ್ದರು. ಆದರೆ, 2020 ರ ನವೆಂಬರ್​ನಲ್ಲಿ ಪತ್ನಿ ಮಲ್ಲಿಗೆ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಶ್ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ.

     

    ಸುರೇಶ್‌ ಮೇಲೆ ಬಂದಿತ್ತು ಅನುಮಾನ :

    ಆದರೆ ಆ ಬಳಿಕ ಸುರೇಶ್‌ ಮೇಲೆಯೇ ಪೊಲೀಸರಿಗೆ ಅನುಮಾನ ಶುರುವಾಗಿತ್ತು. 2021ರ ಜೂನ್​ ಮೂರನೇ ವಾರದಲ್ಲಿ ಕುಶಾಲನಗರಕ್ಕೆ ಖಾಸಗಿ ಕಾರಿನಲ್ಲಿ ಒಂದಷ್ಟು ಮಂದಿ ಪೊಲೀಸರು ಬಂದಿದ್ದಾರೆ. ಬಂದವರು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲಿಸ್ ಠಾಣೆಯ ಸಿಬ್ಬಂದಿಯಾಗಿರುತ್ತಾರೆ. ಅವರು ಸುರೇಶನನ್ನು ಬರ ಹೇಳಿ, ಮಹಿಳೆಯೊಬ್ಬಳ ಮೃತದೇಹ ಸಿಕ್ಕಿದೆ, ಬಂದು ಗುರುತು ಪತ್ತೆ ಮಾಡು ಎಂದು ಬಲವಂತದಿಂದ ಬೆಟ್ಟದಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.

    ಅಲ್ಲಿ ಯಾವುದೋ ಮಹಿಳೆಯ ಸೀರೆ ಲಂಗ, ಒಳ ಉಡುಪು ಚಪ್ಪಲಿ ಎಲ್ಲಾ ತೋರಿಸಿ, ‘ಇದು ನಿನ್ನದೇ ಹೆಂಡತಿಯದ್ದು. ನೀನೇ ಕೊಲೆ ಮಾಡಿದ್ದೀ, ಒಪ್ಪಿಕೋ’ ಎಂದು ಚಿತ್ರ ಹಿಂಸೆ ಕೊಟ್ಟಿದ್ದರಂತೆ. ಇದೇ ಪ್ರಕರಣದಲ್ಲಿ 2021 ರ ಜುಲೈ 18ರಂದು ಬೆಟ್ಟದಪುರ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿ ನಂತರ ಅವರು ಜೈಲು ಸೇರಿದ್ದಾರೆ.

    ಆ ಬಳಿಕ 2022ರ ಜನವರಿಯಲ್ಲಿ ವಕೀಲರ ಕೋರಿಕೆ ಮೇರೆಗೆ ಪೊಲೀಸರು ಸತ್ತಿದ್ದಾಳೆ ಎಂದು ತಿಳಿಸಿದ್ದ ಮಹಿಳೆಯ ಅಸ್ತಿ ಪಂಜರ ಹಾಗೂ ಮಲ್ಲಿಗೆಯ ತಾಯಿಯ ರಕ್ತದ ಮಾದರಿ ಸಂಗ್ರಹಿಸಿ ಡಿಎನ್​ಎ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅಲ್ಲಿ ಬೆಟ್ಟದಪುರ ಪೊಲಿಸರು ಮಲ್ಲಿಗೆಯದ್ದು ಎಂದು ಪ್ರತಿಪಾದಿಸಿದ ದೇಹ ಆಕೆಯದ್ದಲ್ಲ ಎಂಬ ವರದಿ ಬರುತ್ತದೆ. ಆದರೂ ಬೆಟ್ಟದಪುರ ಪೊಲೀಸರು ಸುರೇಶನನ್ನು ಎರಡು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿರುತ್ತಾರೆ. ಇದಾದ ಬಳಿಕ ವಕೀಲ ಪಾಂಡು, ಹರಸಾಹಸಪಟ್ಟು ಹೈಕೋರ್ಟ್​ ಮೊರೆ ಹೋಗಿ 2024ರಲ್ಲಿ ಸುರೇಶ್​​ ಅವರನ್ನು ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು. ಇಷ್ಟೆಲ್ಲಾ ಆದಮೇಲೂ ಸಹ ಸುರೇಶ್‌ ತನ್ನ ಪತ್ನಿಯ ಹುಡುಕಿಕೊಡುವಂತೆ ಮತ್ತೆ ಪೊಲೀಸ್ ಮೊರೆ ಹೋಗಿದ್ದ ಎನ್ನಲಾಗುತ್ತಿದೆ.

    ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ ಮಲ್ಲಿಗೆ ಜೀವಂತವಾಗಿ ಮಡಿಕೇರಿ ಹೋಟೆಲ್​​ನಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ ಹಾಗೂ ಅವರ ಸ್ನೇಹಿತರ ಕಣ್ಣಿಗೆ ಬಿದ್ದಿದೆ. ಈ ಅವಕಾಶ ಬಿಟ್ಟರೆ ಮತ್ತೆ ಸಿಗಲ್ಲ ಎಂದು ಯೋಚಿಸಿದ ಸುರೇಶ್​ ಮತ್ತು ಆತನ ಸ್ನೇಹಿತರು ಮಡಿಕೇರಿ ಪೊಲಿಸರ ಸಹಾಯ ಪಡೆದು ಮಲ್ಲಿಗೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತನ್ನ ಪ್ರಿಯಕರ ಗಣೇಶನ ಜೊತೆ ವಿರಾಜಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ವಾಸವಿರುವುದಾಗಿ ಹೇಳಿದ್ದಾಳೆ.

    ಸದ್ಯ ಮಲ್ಲಿಗೆಯನ್ನು ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಬೆಟ್ಟದಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ವಕೀಲ ಪಾಂಡು ಅವರ ಶ್ರಮದಿಂದಾಗಿ ಮಲ್ಲಿಗೆಯನ್ನು ಇದೀಗ ಮೈಸೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಇದೀಗ ಸುಳ್ಳು ಆರೋಪ ಪಟ್ಟಿ ದಾಖಲಿಸಿದ ಬೆಟ್ಟದಪುರ ಠಾಣೆಯ ತನಿಖಾಧಿಕಾರಿ, ಮೈಸೂರು ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದೆ. ಕುಶಾಲನಗರ ಗ್ರಾಮಾಂತರ ಠಾಣೆ ಪೊಲಿಸರು ಯಾಕೆ ಮಲ್ಲಿಗೆಯನ್ನು ಹುಡುಕಲಿಲ್ಲ?  ಇತ್ತ ಬೆಟ್ಟದಪುರ ಠಾಣೆ ಪೊಲೀಸರು ಯಾವುದೋ ಮಹಿಳೆಯ ಮೃತದೇಹವನ್ನು ಮಲ್ಲಿಗೆಯದ್ದೇ ಮೃತದೇಹ ಎಂದು ಯಾಕೆ ಕೇಸ್ ದಾಖಲಿಸಿದ್ದರು? ಹಾಗೆಯೇ ಅಂದು ಪತ್ತೆಯಾದ ದೇಹ ಯಾರದ್ದು? ಆಕೆಯನ್ನು ಯಾರು ಕೊಲೆ ಮಾಡಿದ್ದು? ಈ ಎಲ್ಲಾ ವಿಚಾರಗಳು ಇದೀಗ ಹೊಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಹಾಗೆಯೇ ಈ ಮೂಲಕ ಅಮಾಯಕ ಆದಿವಾಸಿ ಸುರೇಶ್​ ಮತ್ತು ಆತನ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ

    Demo
    Share. Facebook Twitter LinkedIn Email WhatsApp

    Related Posts

    ಮಲೆಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ದುರಂತ ಅಂತ್ಯ: ಐವರನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು!

    June 27, 2025

    ಬಿ ಕಾಂ, ಎಲ್ ಎಲ್ ಬಿ ಕೋರ್ಸ್ ಆರಂಭ: ಮೋಹನ ಲಿಂಬಿಕಾಯಿ

    June 27, 2025

    ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

    June 27, 2025

    ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

    June 27, 2025

    ಬೈಕ್ ನಲ್ಲಿ ಅಕ್ರಮ ಗಾಂಜಾ ಸಾಗಾಟ: ಮೂವರು ಅರೆಸ್ಟ್!

    June 27, 2025

    ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!

    June 27, 2025

    ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್!

    June 27, 2025

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.