ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು!

ಮುಳಬಾಗಿಲು – ದೇವಾಲಯದ ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಳಬಾಗಿಲು ತಾಲೂಕಿನ ಕುರುಡುಮಲೆ ದೇವಾಲಯದ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಕುಶಾಲ್ ಮೃತ ಬಾಲಕ. ಕೆಆರ್‌ಎಸ್ ಡ್ಯಾಂ ಭರ್ತಿ: ಇಂದು ಕಾವೇರಿ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!   ಚಿತ್ರದುರ್ಗ ಜಿಲ್ಲೆಯ ಮುಳ್ಳಾಲಕೆರೆ ತಾಲಕಟ್ಟ ನಿವಾಸಿ ಎಂದು ತಿಳಿದುಬಂದಿದೆ. ಪೋಷಕರೊಂದುಗೆ ದೇವಾಲಯಕ್ಕೆ ಬಂದಿದ್ದ ಬಾಲಕ, ಆಟವಾಡುತ್ತಿದ್ದ ವೇಳೆ ಕಲ್ಯಾಣಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.