ಚಿಕ್ಕೋಡಿ:- ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ತಗ್ಗಿದ್ದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ-ದತ್ತವಾಡ, ಕಲ್ಲೋಳ-ಯಡೂರ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.
ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ನದಿಯ ಸೇತುವೆಗಳು ಹಾಗೂ ಕೃಷ್ಣಾ ಕಲ್ಲೋಳ-ಯಡೂರ ಸಂಚಾರಕ್ಕೆ ಮುಕ್ತವಾಗಿವೆ. ಕೃಷ್ಣಾ ನದಿ ತೀರದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.