ಚಿಕ್ಕೋಡಿ:-ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಧೀಡಿರ್ ದಾಳಿ ನಡೆಸಿದರು. ಈ ವೇಳೆ ಪೆಟ್ರೋಲ್ ಬಂಕ್ ಗೆ ಎನ್ ಓಸಿ ನೀಡಲು 12 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ ಬಿದ್ದಿದ್ದಾರೆ.
ನಕ್ಕರೆ ಡಿಂಪಲ್ ಬೀಳುತ್ತಾ!? ಇದು ಅದೃಷ್ಟ ಅಲ್ಲ ಮರ್ರೆ.. ಇದು ಆರೋಗ್ಯ ಸಮಸ್ಯೆ ಅಂತೆ!
ಹಣ ಸ್ವೀಕರಿಸುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪರಿಸರ ಮಾಲಿನ್ಯಧಿಕಾರಿ ಶೋಭಾ ಪೊಳ್ ಹಾಗೂ ಕಂಪ್ಯೂಟರ್ ಆಪರೇಟರ್ ಪ್ರವೀಣ ದೊಡಮನಿ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು, ಸಾಗರ ದೋಡಮನಿ ಎಂಬುವರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಾಗರ ದೋಡಮನಿ ಅವರು, ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್ಪಿ ಬಿ ಎಸ ಪಾಟೀಲ . ಇನ್ಸ್ಪೆಕ್ಟರ್ ಎಸ್ ಎಚ್ ಹೋಸಮನಿ ನೇತೃತ್ವದಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.