ಬಾಗಲಕೋಟ:- ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಇಲ್ಲಿನ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ಮಾಡಿದ್ದಾರೆ.
Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!
ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಈ ವೇಳೆ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಡಳಿತ ಭವನದ ಮುಖ್ಯ ಗೇಟ್ ನಲ್ಲಿ ಪೊಲೀಸರು ರೈತರನ್ನ ತಡೆಹಿಡಿದರು. ಈ ವೇಳೆ ಕೆಲಕಾಲ ರೈತರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜಿಲ್ಲಾಡಳಿತ ಭವನದ ಒಳಗೆ ಪ್ರವೇಶಿಸಲು ಅವಕಾಶ ನೀಡಿ ಹಿನ್ನಲೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿದ ರೈತ ಬಾಂಧವರು, ಆದಷ್ಟು ಬೇಗ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ.