ಬೆಂಗಳೂರು:- ಇತ್ತೀಚೆಗೆ ರಾಜ್ಯ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ಡೀಸೆಲ್ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಇದರಿಂದ ಸಿಟ್ಟಿಗೆದ್ದಿರುವ ಲಾರಿ ಚಾಲಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.
ಸರ್ಕಾರಿ ನೌಕರರ ಗಮನಕ್ಕೆ: ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ!
ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ತೆರಳುವ ಸರಕು ಸಾಗಣೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ.
ಪ್ರಸ್ತುತ ಡಿಸೇಲ್ ದರ ಹೆಚ್ಚಳ, ರಾಜ್ಯ ಹೆದ್ದಾರಿಗಳಿಗೆ ಟೋಲ್ ಅಳವಡಿಕೆ ಹಣ ವಸೂಲಿ, ಆರ್ಟಿಓ ಬಾರ್ಡರ್ ಚೆಕ್ ಪೋಸ್ಟ್, FC ಶುಲ್ಕ ಹೆಚ್ಚಿಸಿರುವುದು, ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ನೋ ಎಂಟ್ರಿ, ಚಾಲಕರ ಮೇಲೆ ಹಲ್ಲೆ ಹೀಗೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ತಿಳಿಸಿದ್ದಾರೆ.
ಆಲ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಕರ್ನಾಟಕ ಗೂಡ್ಸ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಏರ್ ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್, ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಅಸೋಸಿಯೇಷನ್, ಜಲ್ಲಿ ಕಲ್ಲು, ಮರಳು ಲಾರಿ ಅಸೋಸಿಯೇಷನ್, ರಾಜ್ಯ ಪಡಿತರ ಆಹಾರ ಧಾನ್ಯಗಳ ಸಾಗಾಣಿಕೆದಾರರ ಸಂಘ, ಸೌಥ್ ಜೋನ್ ಲಿಪಿಜಿ ಅಸೋಸಿಯೇಷನ್, ಜಲ್ಲಿ, ಮರಳು ಸಾಗಣೆ ವಾಹನಗಳು, ಗ್ಯಾಸ್ ಟ್ಯಾಂಕ್ ಮಾಲೀಕರ ಸಂಘ ಸಹಿತ 69 ಸಂಘಟನೆಗಳು ಮುಷ್ಕರ ಬೆಂಬಲಿಸಿವೆ. ರಾಜ್ಯದಲ್ಲಿ ಸುಮಾರು 700 ಗೂಡ್ಸ್ ಕಚೇರಿಗಳಿದ್ದು, ಬಂದ್ ಆಗಲಿವೆ.