Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಾರ್ವಜನಿಕರ ಕುಂದುಕೊರತೆ ಅರ್ಜಿಯನ್ನು 15 ದಿನದೊಳಗಾಗಿ ವಿಲೇವಾರಿ ಮಾಡಿ : ಎನ್. ಚಲುವರಾಯಸ್ವಾಮಿ

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಮಂಡ್ಯ :– ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಕುಂದು ಕೊರತೆ ಅರ್ಜಿಯನ್ನು 15 ದಿನದೊಳಗಾಗಿ ವಿಲೇವಾರಿ ಮಾಡಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದರು.

    ಸಾರ್ವಜನಿಕರು ತಮ್ಮ ಕುಂದು ಕೊರತೆಗೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಯ ಅಧಿಕಾರಿಗಳನ್ನು ಸಂಪರ್ಕಿಸಿ. ಕೆಲಸವಾಗದೇ ಇದ್ದ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸಿ. ಈ ಹಂತದಲ್ಲೂ ಕೆಲಸವಾಗದಿದ್ದಲ್ಲಿ ನನ್ನ ಕಛೇರಿಯನ್ನು ಸಂಪರ್ಕಿಸಬಹುದು ಎಂದರು.

    ಕೊಪ್ಪ ಹೋಬಳಿಗೆ ಸಂಬಂಧಿಸಿದಂತೆ 8 ಗ್ರಾಮ ಪಂಚಾಯಿತಿಗಳಿದ್ದು, ಈ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಪರಿಹರಿಸಲು ಇಂದು ಜನತಾ ದರ್ಶನವನ್ನು ಆಯೋಜಿಸಲಾಗಿದೆ. ಕೊಪ್ಪ ಭಾಗದ ಜನರು ಆಧಾರ್ ತಿದ್ದುಪಡಿ ಹಾಗೂ ನೋಂದಣಿಗಾಗಿ ತಾಲೂಕು ಅಥವಾ ಜಿಲ್ಲಾ ಕೇಂದ್ರಕ್ಕೆ ತೆರಳಬೇಕಿತ್ತು ಇದನ್ನು ತಪ್ಪಿಸಲು ಕೊಪ್ಪದಲ್ಲಿ ಹೊಸ ಆಧಾರ್ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ 100 ದಿನದೊಳಗಾಗಿ 04 ಗ್ಯಾರಂಟಿಗಳನ್ನು ಈಡೇರಿಸಿದೆ. ಜನಪ್ರತಿನಿಧಿಗಳು ಸಾರ್ವಜನಿಕರಿಗೆ ನೀಡುವ ಭರವಸೆಗಳನ್ನು ಪೂರ್ಣಗೊಳಿಸಿದರೆ ಮಾತ್ರ ಸಾರ್ವಜನಿಕರ ನಂಬಿಕೆ ಹಾಗೂ ವಿಶ್ವಾಸಗಳಿಸಲು ಸಾಧ್ಯವಾಗುತ್ತದೆ ಎಂದರು.

    ಕೊಪ್ಪ ಹೋಬಳಿಯಲ್ಲಿ ಪೌತಿ ಖಾತೆ ಆಂದೋಲನ ಯೋಜನೆ ಸಂಬಂಧ ಮೃತರ ಪಟ್ಟಿಯೊಂದಿಗೆ ಮನೆ ಮನೆಗೆ ಭೇಟಿ ನೀಡಿ ವಾರಸುದಾರರಿಂದ 658 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಇವರಿಗೆ ಪೌತಿ ಖಾತೆ ಮಾಡಿಕೊಡಲಾಗುವುದು ಎಂದರು.

    ಅತಿವೃಷ್ಠಿ ಹಾಗೂ ಅನಾವೃಷ್ಠಿ ಉಂಟಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪರಿಹಾರ ಒದಗಿಸಲಿದೆ. ರಾಜ್ಯದಲ್ಲಿ ಉಂಟಾಗಿರುವ ಬರ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಬರದ ಹಿನ್ನೆಲೆಯಲ್ಲಿ ಜನರಿಗೆ ರಾಜ್ಯ ಸರ್ಕಾರ ಸ್ಪಂದಿಸಲು ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಸಬ್ಸಿಡಿ, ಸಹಾಯಧನ, ಸಾಮಾಜಿಕ ಪಿಂಚಣಿ ಮೂಲಕ 75 ಸಾವಿರ ಕೋಟಿ ವೆಚ್ಚ ಮಾಡಿದೆ ಎಂದರು.

    ಬೆಳೆ ವಿಮೆ ಯೋಜನೆಯಡಿ 53,000 ರೈತರ ಹೆಸರು ನೊಂದಾಯಿಸಿದ್ದು, ಸರ್ಕಾರ 1500 ಕೋಟಿ ಹಾಗೂ ರೈತರು 50 ಕೋಟಿ ವಿಮೆ ಕಂಪನಿಗೆ ಪಾವತಿಸಿದೆ. ಮಳೆಕೊರತೆ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿ ಬೆಳೆ ನಾಶವಾಗಿದ್ದು, ಪ್ರತಿ ಎಕರೆಗೆ 9,438 ರೂಗಳಂತೆ ಮದ್ದೂರು ತಾಲ್ಲೂಕಿನಲ್ಲಿ 103 ಕೋಟಿ ಹಾಗೂ ರಾಜ್ಯಾದ್ಯಂತ 230 ಕೋಟಿ ರೂಗಳನ್ನು ಪಾವತಿಸಿದೆ ಎಂದರು.

    ಸಾಮಾಜಿಕ ಭದ್ರತಾ ಯೋಜನೆ ಅಡಿ 100 ಫಲಾನುಭವಿಗಳಿಗೆ ಪಿಂಚಣಿ ಮಾಸಾಸನ ವಿತರಣೆ ಮಾಡಲಾಯಿತು ಹಾಗೂ 11ಇ ಮತ್ತು ಆರ್. ಆರ್. ಟಿ ಶಾಖೆಯ 180 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು. ಇತರೆ ಇಲಾಖೆಗಳಿಂದ ಒಟ್ಟು 119 ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಾಯಿತು.

    ಇದೇ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಮದ್ದೂರು ತಹಶೀಲ್ದಾರ್ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ಆನಂದ್ ಕುಮಾರ್, ಜಂಟಿ ಕೃಷಿ ನಿರ್ದೇಶಕರಾದ ಅಶೋಕ್ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರರಿದ್ದರು.

    ಇಂದು ಜನತಾ ದರ್ಶನದಲ್ಲಿ ಒಟ್ಟು 84 ಅರ್ಜಿಗಳು ಸ್ವೀಕೃತವಾಗಿದ್ದು, ವಿವರ ಇಂತಿದೆ.
    ಕಂದಾಯ ಇಲಾಖೆ – 48 ಗ್ರಾಮೀಣ ಅಭಿವೃದ್ಧಿ ಇಲಾಖೆ – 09, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-01, ಕೆ.ಎಸ್.ಆರ್.ಟಿ.ಸಿ-02, ಭೂಸ್ವಾಧೀನ ಇಲಾಖೆ-11, ಆರೋಗ್ಯ ಇಲಾಖೆ -02, ಲೋಕೋಪಯೋಗಿ ಇಲಾಖೆ -05, ಕೆ.ಇ.ಬಿ-02, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ -01, ಕೃಷಿ ಇಲಾಖೆ -02, ಹಿಂದುಳಿದ ವರ್ಗಗಳ ಇಲಾಖೆ -01 ಅರ್ಜಿಗಳನ್ನು ವಿಲೇವಾರಿ ಮಾಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೋಲಾರ ಡಿಸಿಸಿ ಬ್ಯಾಂಕ್‌ ಚುನಾವಣೆ ಫಲಿತಾಂಶ ಪ್ರಕಟ: ಬ್ಯಾಲಹಳ್ಳಿ ಗೋವಿಂದೇಗೌಡಗೆ ಗೆಲುವು!

    May 28, 2025

    ಕಮಲ್ ಹಸನ್ ವಿರುದ್ಧ ಹುಬ್ಬಳ್ಳಿಯಲ್ಲಿ ಅಪ್ಪು ಫ್ಯಾನ್ಸ್‌ ಪ್ರತಿಭಟನೆ

    May 28, 2025

    ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!

    May 28, 2025

    Bagalakote: ನಿಗದಿತ ಜಾಗದಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಿ: ರಬಕವಿ ಸಮಸ್ತ ಮಂಡಳಿ ಆಗ್ರಹ!

    May 28, 2025

    ಕಮಲ್‌ ಯಡವಟ್ಟು: ಕನ್ನಡ ಭಾಷೆಗೆ ಧಕ್ಕೆ ತರುವ ಮಾತನ್ನು ಒಪ್ಪಲ್ಲ: ಲಾಡ್‌ ಎಚ್ಚರಿಕೆ

    May 28, 2025

    ಕನ್ನಡ ಹುಟ್ಟಿದ್ದು ತಮಿಳಿನಿಂದ: ಕಮಲ್ ಹಾಸನ್ ಹೇಳಿಕೆಗೆ ವ್ಯಾಪಕ ವಿರೋಧ.. ಬೆಳಗಾವಿಯಲ್ಲಿ ಪ್ರೊಟೆಸ್ಟ್!

    May 28, 2025

    Crime News: ಹೆಂಡ್ತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ: ಕೌಟುಂಬಿಕ ಕಲಹದ ಶಂಕೆ!

    May 28, 2025

    ಇದೊಂದು ರಾತ್ರೋ ರಾತ್ರಿ ಫೀಲ್ಡ್ ಗಿಳಿಯುವ ಗಂಟುಮೂಟೆ ಗ್ಯಾಂಗ್!

    May 28, 2025

    ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಜನರಲ್ಲಿ ಹೆಚ್ಚಿದ ಆತಂಕ!

    May 28, 2025

    ಮುಂಗಾರು ಹೊಡೆತ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂತೋಷ್‌ ಲಾಡ್‌ ಭೇಟಿ

    May 28, 2025

    ಕುಂದಗೋಳ: ಮಲ ತ್ಯಾಜ್ಯ ಸಂಸ್ಕರಣಾ(ಎಫ್.ಎಸ್.ಟಿ.ಪಿ) ಘಟಕದ ಭೂಮಿ ಪೂಜೆ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.