ಹಾವೇರಿ : ಕೃಷಿ ಹಾಗೂ ಕೃಷಿಯೇತರ ಸಾಲ ನೀಡುವ ಗುರಿ ದ್ವಿಗುಣವಾಗಬೇಕು. ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕುಗಳ ಪಾತ್ರ ಪ್ರಮುಖ ವಾಗಿದೆ. ಹಾಗಾಗಿ ಅಧಿಕಾರಿಗಳು ಹಾಗೂ ಬ್ಯಾಂಕರ್ಸ್ ಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಮಿತಿ ಹಾಗೂ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್ ಠೇವಣಿ ರೆಸೊ ಹೆಚ್ಚಾಗಬೇಕು. ಹಾವೇರಿ ಜಿಲ್ಲೆ ಆರ್ಥಿಕವಾಗಿ ಮುಂದೆ ಬರಬೇಕು ಹಾಗೂ ನಂಬರ್ ಒನ್ ಜಿಲ್ಲೆಯಾಬೇಕು ಎಂಬುದು ನನ್ನ ಕನಸು. ನೆಪ ಹೇಳುವುದು ಬಿಟ್ಟು ಜವಾಬ್ದಾರಿಯಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಮೆಕ್ಕೆಜೋಳ ಹಾಗೂ ಕಬ್ಬು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಯಾವ ಬೆಳೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ತಿಳಿದುಕೊಳ್ಳಬೇಕು. ರೈತರಿಗೆ ಬೆಳೆಸಾಲ ಸೇರಿದಂತೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ವಿವಿಧ ವಲಯಗಳಿಗೆ ಸಾಲ ನೀಡಲು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕುಗಳ ಅವಶ್ಯಕತೆ ಇದ್ದು, ಶಿಗ್ಗಾವ ತಾಲೂಕ್ ಚಂದಾಪುರ ಹಾಗೂ ಹಾವೇರಿ ತಾಲೂಕ ಹೊಸರಿತ್ತಿಯಲ್ಲಿ ಕೂಡಲೇ ಬ್ಯಾಂಕ್ ಶಾಖೆಗಳನ್ನು ಆರಂಭಿಬೇಕು. ಈ ಬಗ್ಗೆ ಆರ್ ಬಿ ಐ ಗೆ ಪತ್ರ ಬರೆಯುವಂತೆ ನಿರ್ದೇಶನ ನೀಡಿದರು.
ಕರ್ನಾಟಕ ಬ್ಯಾಂಕ್ ನವರ ರೆಸೊ ಹೆಚ್ಚಾಗ ಬೇಕು. ಬಯಲು ಸೀಮೆ ಜಿಲ್ಲೆಗಳ ಠೇವಣಿ ಹಣ ಕರಾವಳಿಯಲ್ಲಿ ಸಾಲ ನೀಡಲಾಗುತ್ತಿದೆ. ಈ ಭಾಗದ ಜನರಿಗೆ ಸಾಲ ಸೌಲಭ್ಯ ದೊರೆಯಲಿ, ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಬ್ಯಾಂಕ್ ಅಧಿಕಾರಿಗೆ ಎಚ್ಚರಿಕೆ ನೀಡಿದರು. ಡಿ ಬಿಎಸ್ ಬ್ಯಾಂಕನವರು ನೂರಕ್ಕೆ ನೂರರಷ್ಟು ರೆಸೊ ಆಗಬೇಕು. ಇಲ್ಲಾ ಅಂದ್ರೆ ಆರ್ ಬಿ ಐ ಗೆ ಪತ್ರ ಬರೆಯಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎನ್ ಆರ್ ಎಲ್ ಎಂ ಯೋಜನೆಯಡಿ ಜಿಲ್ಲೆಯ ತಾಲೂಕು ಗಳು ಒಳಗೊಂಡಂತೆ 50 ಸಾವಿರ ಸಂಘಗಳ ನೋಂದಣಿ ಯಾಗಬೇಕು. ಈ ಸಂಘಗಳಿಗೆ ಉದ್ಯೋಗ ಮಾಡಲು ಬ್ಯಾಂಕುಗಳು ಸಾಲ ನೀಡಬೇಕು ಎಂದು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳೆಯರು ಹಾಗೂ ಇತರೆ ವಲಯಕ್ಕೂ ಸಾಲ ನೀಡಬೇಕು ಎಂದು ಸೂಚನೆ ನೀಡಿದರು. ಬ್ಯಾಂಕ್ ವ್ಯವಹಾರದ ಭಾಷೆ ಸಮಸ್ಯೆ ಕುರಿತು ದೂರುಗಳು ಬರುತ್ತಿದ್ದು, ಹಾಗಾಗಿ ಬ್ಯಾಂಕ್ ಗಳಲ್ಲಿ ಕನ್ನಡ ಮಾತನಾಡುವವರು 2 ರಿಂದ 3 ಜನರು ಇರುವಂತೆ ನೋಡಿಕೊಳ್ಳುವoತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲ ಬ್ಯಾಂಕ್ ಗಳಲ್ಲಿ ಎಲ್ಲ ವಲಯಕ್ಕೂ ಸಾಲ ಸೌಲಭ್ಯ ಸಿಗುವಂತಾಗಬೇಕು. ಜಿಲ್ಲೆಯಲ್ಲಿ ವೈದ್ಯಕಿಯ, ಇಂಜನಿಯರಿಂಗ್, ಡಿಪ್ಲೋಮ, ಕಾನೂನು ಸೇರಿದಂತೆ ವಿವಿಧ ವಿದ್ಯಾಲಯಗಳಿವೆ. ಹಾಗಾಗಿ ಶೈಕ್ಷಣಿಕ ಸಾಲ ನೀಡಿಕೇಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಬೀದಿ ಬದಿ ವ್ಯಾಪಾರಿಗಳಿಂದ ಹಿಡಿದು ದೊಡ್ಡ ಉದ್ಯಮಿ ಗಳಿಗೂ ಆರ್ಥಿಕ ಸಹಾಯ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಅವಲಂಬಿತ ಹೈನುಗಾರಿಕೆ, ಮೀನುಗಾರಿಕೆ ಹಾಗೂ ಗುಡಿ ಕೈಗಾರಿಕೆಗೆ ಸಾಲ ಸೌಲಭ್ಯ ಗಳಿದ್ದು, ಈ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ತಲುಪಬೇಕು. ಈ ಕುರಿತು ಅಧಿಕಾರಿಗಳು ಹೆಚ್ಚಿನ ಪ್ರಚಾರ ಕೈಗೊಳ್ಳ ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆಯಾಗಂತೆ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ವಾಗದಂತೆ ನಿಗಾವಹಿಸಬೇಕು. ಜೊತೆಗೆ ಕಳಪೆ ಬಿತ್ತನೆ ಬೀಜ ಮಾರಾಟ ವಗದಂತೆ ನಿಗಾ ವಹಿಸಬೇಕು. ಇಂತಹ ಪ್ರಕರಣ ಕಂಡುಬoದರೆ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರದಾನ್ ಮಂತ್ರಿ ಪಸಲ್ ಭಿಮಾ ಯೋಜನೆ, ಅಮೃತ್ ಕುರಿಗಾಯಿ ಯೋಜನೆ, ಸ್ವನಿಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು.
ಇದೆ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಖಾತೆ ಹೊಂದಿದ ಗ್ರಾಹಕ ಆಕಸ್ಮಿಕ ಮರಣ ಹೊಂದಿದ ಹಿನ್ನಲೆ ಯಲ್ಲಿ ಮೃತನ ಕುಟುಂಬ ಕ್ಕೆ ರೂ. 38,45,776 ಮೊತ್ತದ ಚೆಕ್ ವಿತರಣೆ ಮಾಡಲಾಯಿತು.
ಲೀಡ್ ಬ್ಯಾಂಕ್ ಮ್ಯಾನೇಜರ್ ಜೀವನ ಅವರು ಜಿಲ್ಲೆಯ ಬ್ಯಾಂಕುಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಸಿ ಇ. ಒ ರುಚಿ ಬಿಂದಾಲ್, ಬ್ಯಾಂಕ್ ಅಧಿಕಾರಿಗಳಾದ ಪಂಕಜ ಕುಮಾರ್, ಸೂರಜ್ ಎನ್, ಕೆವಿಜಿ ಬ್ಯಾಂಕ್ ಪ್ರಾದೇಶಿಕ ಅಧಿಕಾರಿ ಸೋಮಶೇಖರ್, ನಬಾರ್ಡ್ ನ ರಂಗನಾಥ್ ಹಾಗೂ ಇತರ ಬ್ಯಾಂಕ್ ಗಳ ಪ್ರಾದೇಶಿಕ ಅಧಿಕಾರಿಗಳು ಉಪಸ್ಥಿತರಿದ್ದರು