Close Menu
Ain Live News
    Facebook X (Twitter) Instagram YouTube
    Monday, May 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Health Tips: ನಿಮಗೆ ಗೊತ್ತೆ.? “ದೊಡ್ಡಪತ್ರೆ”ಯಲ್ಲಿದೆ ದೊಡ್ಡ ದೊಡ್ಡ ಆರೋಗ್ಯ ಸಮಸ್ಯೆಯ ನಿವಾರಣೆಯ ಗುಣ!

    By AINNovember 18, 2024
    Share
    Facebook Twitter LinkedIn Pinterest Email
    Demo

    ಮನೆಯ ಹಿತ್ತಲಿನಲ್ಲಿದ್ದ ಗಿಡವನ್ನೇ ಜ್ವರ, ಶೀತ ಸೇರಿದಂತೆ ಹಲವು ಕಾಯಿಲೆಗಳಿಗೆ ಮದ್ದಾಗಿ ಬಳಸಿಕೊಳ್ಳಬಹುದು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನ. ದೊಡ್ಡ ಪತ್ರೆಯಲ್ಲಿ ವಿಟಮಿನ್‌ ʼಸಿʼ, ಫೈಬರ್‌ ಮತ್ತು ಕ್ಯಾಲ್ಸಿಯಂ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ. ದೊಡ್ಡಪತ್ರೆಯ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.  

    ಚರ್ಮದ ಸೋಂಕು ಕಡಿಮೆ ಮಾಡಲು: ದೊಡ್ಡಪತ್ರೆ ಎಲೆಯನ್ನು ಕಿವುಚಿ ರಸ ತೆಗೆದು, ಚರ್ಮದ ಸೋಂಕು ಅಥವಾ ಕೀಟ ಕಡಿತದ ಜಾಗಕ್ಕೆ ಲೇಪಿಸಿ. ಇದರಿಂದ ಉರಿ, ಬಾವು ಮತ್ತು ತುರಿಕೆ ಕೂಡಲೇ ಕಡಿಮೆಯಾಗುವುದು.

    ಜೀರ್ಣ ಶಕ್ತಿ ಹೆಚ್ಚಳ:ಬಹುತೇಕರಲ್ಲಿ ಜೀರ್ಣ ಶಕ್ತಿಯ ಸಮಸ್ಯೆ ಕಾಡುತ್ತಿರುತ್ತದೆ. ಹೀಗಾಗಿ ಸುಲಭವಾಗಿ ಜೀರ್ಣ ಶಕ್ತಿ ಹೆಚ್ಚಳ ಮಾಡಿಕೊಳ್ಳಲು ಪ್ರತಿನಿತ್ಯ ದೊಡ್ಡಪತ್ರೆಯ ಎಲೆಯನ್ನು ಉಪ್ಪಿನೊಂದಿಗೆ ನೆಂಚಿಕೊಂಡು ತಿಂದರೆ ಜೀರ್ಣಶಕ್ತಿ ಹೆಚ್ಚುತ್ತದೆ.

    ಕಟ್ಟಿದ ಮೂಗಿನಿಂದ ನಿವಾರಣೆ:ಒಮ್ಮೆ ಮೂಗು ಕಟ್ಟಿದ್ದು ಅಂದರೆ ಬಹುತೇಕರಿಗೆ ಉಸಿರಾಡಲು ಕಷ್ಟ.. ಇಂತಹ ಸಂದರ್ಭದಲ್ಲಿ ದೊಡ್ಡಪತ್ರೆ ಎಲೆಯನ್ನು ಜಜ್ಜಿ ಆದರ ವಾಸನೆ ಸೇವಿಸಿದರೆ ಕಟ್ಟಿದ ಮೂಗಿನಿಂದ ನಿವಾರಣೆಯನ್ನು ಹೊಂದಬಹುದು.

    ಗ್ಯಾಸ್ಟ್ರಿಕ್‌ ತಡೆಯುತ್ತದೆ:ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಕಾಡುವ ಸಮಸ್ಯೆಯೆಂದರೆ ಅದು ಗ್ಯಾಸ್ಟ್ರಿಕ್ ಸಮಸ್ಯೆ. ನಿಯಮಿತವಾಗಿ ದೊಡ್ಡಪತ್ರೆ ಎಲೆಯನ್ನು ಸೇವನೆ ಮಾಡುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ತಡೆಯಬಹುದು.ದೇಹದಿಂದ ವಿಷವನ್ನು ಹೊರ ಹಾಕುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ.

    ಮಕ್ಕಳ ಜ್ವರ ನಿವಾರಣೆ:ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಕಡಿಮೆಯಾಗುತ್ತದೆ.

    ಕಣ್ಣಿನ ಉರಿ ಕಡಿಮೆ ಮಾಡಲು:ದೊಡ್ಡಪತ್ರೆ ಎಲೆಗಳ ರಸ ಮತ್ತು ಅಷ್ಟೇ ಪ್ರಮಾಣದ ಎಳ್ಳೆಣ್ಣೆ ಸೇರಿಸಿ ಇದನ್ನು ನಿತ್ಯ ತಲೆಗೆ ಹಾಕುವುದರಿಂದ ತಲೆ ತಂಪಾಗುವುದರೊಂದಿಗೆ ಕಣ್ಣುರಿ ಕಡಿಮೆಯಾಗುತ್ತದೆ.

    ಭೇದಿ ನಿಯಂತ್ರಣಕ್ಕೆ: ದೊಡ್ಡಪತ್ರೆ ಎಲೆಗಳನ್ನು ಬಾಡಿಸಿ ರಸವನ್ನು ತೆಗೆದು ಜೇನು ಅಥವಾ ಕಲ್ಲುಸಕ್ಕರೆಯನ್ನು ಸೇರಿಸಿ ದಿನಕ್ಕೆ 3 ಬಾರಿ ಕುಡಿಯುವುದರಿಂದ ಭೇದಿಯು ಕಡಿಮೆಯಾಗುತ್ತದೆ.

    ಕಫ ನಿವಾರಣೆಗೆ:ದೊಡ್ಡಪತ್ರೆಯ ಹಸಿ ಎಲೆಯ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿಯುವುದರಿಂದ ಕಫ ಕಡಿಮೆಯಾಗುತ್ತದೆ.

     ಪಿತ್ತದ ಸಮಸ್ಯೆ ದೂರ ಮಾಡಲು: ದೊಡ್ಡಪತ್ರೆಯ  ಎಲೆಗಳನ್ನು, ಒಂದೆರಡು ಕರಿಮೆಣಸು  ಮತ್ತು ಉಪ್ಪನ್ನು ಸೇರಿಸಿ ಚೆನ್ನಾಗಿ ಜಜ್ಜಿ ರಸವನ್ನು ತೆಗೆಯಬೇಕು. ಈ ರಸವನ್ನು ಕಾಲಿ  ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಪಿತ್ತ ಮತ್ತು ಪಿತ್ತದ ಸಮಸ್ಯೆಗಳಿಂದ ಸುಲಭವಾಗಿ ದೂರವಾಗಬಹುದು.

     

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!

    May 18, 2025

    ಥೈರಾಯ್ಡ್ ನಿಯಂತ್ರಣಕ್ಕೆ ಈ ಹಣ್ಣುಗಳು ಬೆಸ್ಟ್ ಅಂತೆ.. ಈ ಸಮಸ್ಯೆ ಇದ್ದವರು ನೋಡಲೇಬೇಕು!

    May 18, 2025

    ಹೊಟ್ಟೆಯ ಸುತ್ತ ಕೊಬ್ಬು ಸಂಗ್ರಹ ಆಗಿದ್ಯಾ!? ನಿತ್ಯ ಈ ಗಿಡಮೂಲಿಕೆ ಚಹಾ ಕುಡಿಯಿರಿ!

    May 17, 2025

    ಕಬ್ಬಿನ ಹಾಲು ಕುಡಿದಾಕ್ಷಣ ಈ ಆಹಾರಗಳನ್ನು ತಿನ್ನಲೇಬಾರದಂತೆ! ಯಾಕೆ?

    May 17, 2025

    ಶುಗರ್ ಸಮಸ್ಯೆನಾ ಅಥವಾ ತೂಕ ಇಳಿಸಬೇಕಾ? ತೊಂಡೆಕಾಯಿ ತಿನ್ನಿ ಸಾಕು ರಿಸಲ್ಟ್ ಪಕ್ಕಾ..

    May 17, 2025

    Benefits of Salt Water Bath: ಬಿಸಿ ನೀರು ಬಿಟ್ಟಾಕಿ, ಉಪ್ಪು ನೀರಲ್ಲಿ ಸ್ನಾನ ಮಾಡಿ..! ಸಿಗಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು

    May 17, 2025

    ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!

    May 16, 2025

    ಗರ್ಭಿಣಿಯರು ಪಾನೀಪುರಿ ತಿನ್ನುವುದು ಒಳ್ಳೆಯದೋ, ಕೆಟ್ಟದ್ದೋ..? ಇಲ್ಲಿದೆ ಮಾಹಿತಿ

    May 16, 2025

    Dark Spot Remedy: ಮುಖದ ಮೇಲಿನ ಕಪ್ಪು ಕಲೆ ಮುಜುಗರ ಉಂಟು ಮಾಡ್ತಿದ್ರೆ ಇಲ್ಲಿದೆ ಸೂಪರ್‌ ಟಿಪ್ಸ್..!‌

    May 16, 2025

    ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ? ಹಾಗಿದ್ರೆ ಈ ಸಿಂಪಲ್ ಮನೆಮದ್ದು ಬಳಸಿ!

    May 16, 2025

    ನಿಮ್ಮ ಮನೆಯಲ್ಲೂ ಇಲಿಗಳ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಹೀಗೆ ಮಾಡಿ ಓಡ್ಸಿ!

    May 16, 2025

    ತುಂಬಾ ದಪ್ಪಗಿದ್ದೀನಿ ಅಂತ ಚಿಂತೆ ಕಾಡ್ತಿದ್ಯಾ!? ಈ ಬಗೆಯ ಹಣ್ಣುಗಳನ್ನು ಜಾಸ್ತಿ ತಿನ್ನಬೇಡಿ!

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.