Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಭಾರತದಲ್ಲಿ ಉಗುರು ಕತ್ತರಿಸುವ ಬಗ್ಗೆ ಕೆಲ ರೂಢಿಯಿದೆ.  ಭಾರತದಲ್ಲಿ ಸ್ನಾನದ ನಂತ್ರ ಉಗುರು ಕತ್ತರಿಸಬಾರದು ಎನ್ನುತ್ತಾರೆ. ಅದ್ರಲ್ಲೂ ರಾತ್ರಿ ಉಗುರನ್ನು ಕತ್ತರಿಸಬಾರದು ಎಂದು ಹಿರಿಯರು ಹೇಳ್ತಾರೆ. ನಾವು ಯಾಕೆ ರಾತ್ರಿ ಉಗುರು ಕತ್ತರಿಸಬಾರದು ಎಂದು ಮರುಪ್ರಶ್ನೆ ಮಾಡಿದ್ರೆ ಅನೇಕರಿಗೆ ಅದ್ರ ಬಗ್ಗೆ ತಿಳಿದಿಲ್ಲ. ಹಿರಿಯರು ಹೇಳ್ತಾರೆ,ಅದಕ್ಕೆ ಕತ್ತರಿಸಬಾರದು, ಕಾರಣ ಕೇಳ್ಬೇಡಿ ಎನ್ನುತ್ತಾರೆ. ಯಾಕೆ ರಾತ್ರಿ ಉಗುರು ಕತ್ತರಿಸಬಾರದು? ಅದಕ್ಕೆ ಕಾರಣವೇನು ಎಂಬುದನ್ನು ನಾವು ಹೇಳ್ತೇವೆ.

    ಇದು ಮೂಢನಂಬಿಕೆಯೇ?:
    ಅನೇಕರು ಇದನ್ನು ಮೂಢನಂಬಿಕೆ ಎಂದುಕೊಂಡಿದ್ದಾರೆ. ಆದ್ರೆ ಇದಕ್ಕೆ ಯಾವುದೇ ದೃಢವಾದ ಆಧಾರ ಅಥವಾ ತರ್ಕಬದ್ಧ ವಿವರಣೆಯಿಲ್ಲ. ಆದಾಗ್ಯೂ, ಮೂಢನಂಬಿಕೆಗಳನ್ನು ತಳ್ಳಿಹಾಕುವ ಹೆಸರಿನಲ್ಲಿ ನಾವು ತಲೆಮಾರುಗಳಿಂದ ನಮಗೆ ಹಸ್ತಾಂತರಿಸಲ್ಪಟ್ಟ ಬಹಳಷ್ಟು ಉಪಯುಕ್ತ ಸಲಹೆಗಳನ್ನು ನಿರ್ಲಕ್ಷಿಸುತ್ತಿದ್ದೇವೆ. ಇದು ಮೂಢನಂಬಿಕೆ ಎನ್ನುವ ಮೊದಲು ಅದರ ಹಿಂದಿನ ಕಾರಣವನ್ನು ತಿಳಿಯಬೇಕಾಗುತ್ತದೆ.

    ಕಾರಣ ಒಂದು : ಆ ದಿನಗಳಲ್ಲಿ ವಿದ್ಯುತ್ ಇರಲಿಲ್ಲ. ಆದುದರಿಂದ ಜನರು ರಾತ್ರಿ ಹೆಚ್ಚು ಗಾಢವಾದ ಬೆಳಕನ್ನು ಹೊಂದಿರಲಿಲ್ಲ. ಅನೇಕರು ರಾತ್ರಿಯಾಗ್ತಿದ್ದಂತೆ ಮಲಗ್ತಿದ್ದರು. ಮತ್ತೆ ಕೆಲವರು ಮಂದ ಬೆಳಕಿನ ವ್ಯವಸ್ಥೆ ಮಾಡಿಕೊಳ್ತಿದ್ದರು. ಉಗುರು ನಮ್ಮ ದೇಹದ ಸೂಕ್ಷ್ಮ ಭಾಗಗಳಲ್ಲಿ ಒಂದು. ಸ್ವಲ್ಪ ಹೆಚ್ಚು ಕಡಿಮೆಯಾದ್ರೂ ಸಂಪೂರ್ಣ ಉಗುರು ಕಿತ್ತು ಬರುತ್ತದೆ. ಹಾಗಾಗಿ ಉಗುರು ಕತ್ತರಿಸುವಾಗ ಜಾಗೃತೆ ವಹಿಸಬೇಕು. ಆಗ ನೇಲ್ ಕಟರ್ ಇರಲಿಲ್ಲ. ಜನರು ಕತ್ತಿ,ಬ್ಲೇಡ್ ನಂತಹ ಅಪಾಯಕಾರಿ ಆಯುಧಗಳಿಂದ ಉಗುರನ್ನು ಕತ್ತರಿಸುತ್ತಿದ್ದರು. ಉಗುರಿನ ಬದಲು ಕತ್ತಲಿನಲ್ಲಿ ಬೆರಳು ತುಂಡಾದ್ರೆ, ರಾತ್ರಿಯಲ್ಲಿ ವೈದ್ಯಕೀಯ ಚಿಕಿತ್ಸೆ ಕಷ್ಟ. ಈ ಕಾರಣಕ್ಕೆ ಕತ್ತಲಿನಲ್ಲಿ ಉಗುರು ಕತ್ತರಿಸಬಾರದು ಎಂಬ ನಿಯಮ ರೂಢಿಗೆ ಬಂತು.

    ಕಾರಣ ಎರಡು : ಮೇಲೆ ಹೇಳಿದಂತೆ ರಾತ್ರಿ ಸರಿಯಾದ ಬೆಳಕಿರದ ಕಾರಣ ಕತ್ತರಿಸಿದ ಉಗುರಿನ ತುಣುಕುಗಳನ್ನು ಸಂಗ್ರಹಿಸುವುದು ಕಷ್ಟವಾಗಿತ್ತು. ಕೆಲವು ಅಲ್ಲಿಯೇ ಉಳಿದು ಹೋಗ್ತಿದ್ದವು. ಸ್ವಚ್ಛತೆಗೆ ಇದು ಅಡ್ಡಿಯಾಗ್ತಿತ್ತು. ಸಣ್ಣ ಮನೆಗಳಲ್ಲಿ ಜನರು ಅದೇ ಜಾಗದಲ್ಲಿ ಅಡುಗೆ,ಊಟ ತಯಾರಿಸುತ್ತಿದ್ದರು. ಈ ಉಗುರು ಆಹಾರಕ್ಕೆ ಸೇರಿ ಹೊಟ್ಟೆಯೊಳಗೆ ಹೋಗುವ ಅಪಾಯವಿತ್ತು. ಇದನ್ನು ಗಮನದಲ್ಲಿಟ್ಟುಕೊಂಡ ಜನರು ರಾತ್ರಿ ಉಗುರು ಕತ್ತರಿಸಬಾರದು ಎಂಬ ನಿಯಮ ಜಾರಿಗೆ ತಂದರು. 

    ಕಾರಣ ಮೂರು : ನಮ್ಮ ಉಗುರುಗಳು ಕೆರಾಟಿನ್ ನಿಂದ ಮಾಡಲ್ಪಟ್ಟಿದೆ. ಅದಕ್ಕಾಗಿಯೇ ಸ್ನಾನದ ನಂತರ ನಮ್ಮ ಉಗುರುಗಳನ್ನು ಕತ್ತರಿಸುವುದು ಉತ್ತಮ ಎಂದು ಪರಿಗಣಿಸಲಾಗಿದೆ. ಏಕೆಂದರೆ ಆಗ ನಮ್ಮ ಉಗುರುಗಳು ನೀರಿನಲ್ಲಿ ಅಥವಾ ಸಾಬೂನಿನ ನೀರಿನಲ್ಲಿ ನೆನೆಯಲ್ಪಟ್ಟು ಸ್ವಲ್ಪ ಮೃದುವಾಗಿರುತ್ತವೆ. ಉಗುರನ್ನು ಕತ್ತರಿಸುವುದು ಆಗ ಸುಲಭವಾಗುತ್ತದೆ. ಆದರೆ ನಾವು ರಾತ್ರಿಯಲ್ಲಿ ಉಗುರುಗಳನ್ನು ಕತ್ತರಿಸಿದಾಗ, ಅವು ದೀರ್ಘಕಾಲದವರೆಗೆ ನೀರಿನ ಸಂಪರ್ಕಕ್ಕೆ ಬರಲು ಸಾಧ್ಯವಾಗದೆ ಗಟ್ಟಿಯಾಗುತ್ತವೆ. ಆಗ ಉಗುರನ್ನು ಸರಿಯಾಗಿ ಕತ್ತರಿಸಲು ಸಾಧ್ಯವಾಗುವುದಿಲ್ಲ.  

    ಕಾರಣ ನಾಲ್ಕು : ಇದರ ಹಿಂದೆ ಧಾರ್ಮಿಕ ಕಾರಣವೂ ಇರುವಂತಿದೆ. ಸಂಜೆ ಸಮಯದಲ್ಲಿ ಲಕ್ಷ್ಮಿ ಮನೆಗೆ ಪ್ರವೇಶಿಸುತ್ತಾಳೆಂಬ ನಂಬಿಕೆಯಿದೆ.   ಸಮೃದ್ಧಿ ಮತ್ತು ಸಂಪತ್ತನ್ನು ನೀಡಲು ರಾತ್ರಿ ಮನೆಯಲ್ಲಿಯೇ ಇರುತ್ತಾಳೆ ಎಂದು ನಂಬಲಾಗಿದೆ. ಉಗುರು ಕತ್ತರಿಸುವುದು ಲಕ್ಷ್ಮಿ ದೇವಿಗೆ ಅಗೌರವ ತೋರಿದಂತೆ. ಹಾಗಾಗಿ ರಾತ್ರಿ ಉಗುರನ್ನು ಕತ್ತರಿಸಬಾರದು.

    ಏನು ಮಾಡ್ಬೇಕು ?: ಉಗುರನ್ನು ಕತ್ತರಿಸುವಾಗ ಸದಾ ದೊಡ್ಡ ಬೆಳಕಿಗೆ ಆದ್ಯತೆ ನೀಡಿ. ಎಲ್ಲೆಂದರಲ್ಲಿ ಕತ್ತರಿಸಿದ ಉಗುರನ್ನು ಎಸೆಯಬೇಡಿ. ಕತ್ತರಿಸಿದ ಉಗುರನ್ನು ಕಸಕ್ಕೆ ಹಾಕಿ. 

    Demo
    Share. Facebook Twitter LinkedIn Email WhatsApp

    Related Posts

    Diabetes Control : ಮಧುಮೇಹಿಗಳ ಗಮನಕ್ಕೆ : ಈ 5 ವಿಷಯಗಳನ್ನು ನೀವು ನೆನಪಿನಲ್ಲಿಡಬೇಕು!

    June 30, 2025

    Heart Attack: ಹೃದಯಾಘಾತಕ್ಕೆ ಅಸಲಿ ಕಾರಣ..? ಮೊಬೈಲ್, ಜಂಕ್’ಫುಡ್ ಹೃದಯದ ವಿಲನ್..!

    June 30, 2025

    ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?

    June 30, 2025

    ಸಂಜೆ ವಾಕಿಂಗ್ ಮಾಡೋದು ಆರೋಗ್ಯಕ್ಕೆ ಬೆಸ್ಟ್: ಬೆಳಗ್ಗೆ ಟೈಂ ಇಲ್ಲದವರು ಹೀಗೆ ಮಾಡಿ!

    June 29, 2025

    ನಿಮಗಿದು ಗೊತ್ತಾ!? ಹೆಣ್ಣು ಮಕ್ಕಳಿಗೆ ಎಡಭಾಗದಲ್ಲಿ ಏಕೆ ಮೂಗು ಚುಚ್ಚುತ್ತಾರೆ?

    June 29, 2025

    ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!

    June 29, 2025

    ಅತಿಯಾದ ಮೊಬೈಲ್ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಂತೆ!

    June 28, 2025

    ಆನೆಗಳ ಕಿವಿ ಏಕೆ ದೊಡ್ಡದಾಗಿರುತ್ತವೆ? ಇದನ್ನು ನೀವು ತಿಳಿಯಲೇಬೇಕು!

    June 28, 2025

    ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ನೆಟ್ಟರೆ ಹಣದ ಕೊರತೆಯೇ ಇರುವುದಿಲ್ಲ!

    June 28, 2025

    ನಿಮ್ಮ ಹತ್ತಿರ ಇರುವ ಬೆಳ್ಳಿ ಅಸಲಿನಾ? ನಕಲಿನಾ? ತಿಳಿಯಲು ಹೀಗೆ ಮಾಡಿ!

    June 28, 2025

    ನಿಮ್ಮ ಬಳಿ ಈ ವಸ್ತುಗಳಿದ್ದರೆ ಹಾವುಗಳು ಹತ್ತಿರ ಸುಳಿಯಲ್ವಂತೆ!

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.