Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿ.ಕೆ ಶಿವಕುಮಾರ್’ಗೆ ಕಣ್ಣೀರು ಬರುತ್ತಾ? ನನಗೇನೋ ಹಾಗೆ ಅನಿಸಿಲ್ಲ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

    By Author AINJune 5, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ನಡೆಯಬೇಕು. ಆಗ ಮಾತ್ರ ಅಮಾಯಕ ಜೀವಗಳಿಗೆ ಮತ್ತು ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ನಿಮ್ಮ ಸಣ್ಣತನ ಮಾಡಬಾರದು, ಕ್ರೀಡಾ ಮನೋಭಾವದಿಂದ ನೋಡಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಈಗ ಕಣ್ಣೀರು ಹಾಕಿದರೆ ಉಪಯೋಗ ಏನು?

    ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ; ಸಾವಿನ ನಂತರವೂ ಡಿಕೆಶಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕಪ್‌ ಗೆ ಮುತ್ತಿಕ್ಕಿ, ಫೋಟೋ ತೆಗೆಸಿಕೊಂಡು ರೀಲ್ಸ್‌ ಮಾಡಿದ್ದಾರೆ, ನಾಚಿಕೆ ಆಗಲ್ವಾ. ಈಗ ಕಣ್ಣೀರು ಹಾಕಿದರೆ ಪ್ರಯೋಜನ ಏನು ಎಂದು ಅವರು ಕಿಡಿಕಾರಿದರು.

    ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!

    ಕಾಲ್ತುಳಿತ ದುರಂತದಲ್ಲಿ 12 ರಿಂದ 33 ವರ್ಷದವರು ಸಾವನಪ್ಪಿದ್ದಾರೆ. ಸರ್ಕಾರ ಇವರಿಗೆ ಐವತ್ತು ಕೋಟಿ ಹಣ ಪರಿಹಾರ ನೀಡಿದರು ಹೋಗಿರುವ ಜೀವವನ್ನ ಮತ್ತೆ ತರಲು ಸಾಧ್ಯವಿಲ್ಲ. ಮಕ್ಕಳನ್ನ ಕಳೆದುಕೊಂಡ ಪೋಷಕರ ಭವಿಷ್ಯದ ಮುಂದಿನ ಸ್ಥಿತಿ ಏನು.? ಆ ಕುಟುಂಬದಲ್ಲಿ ಅಕ್ಕ ತಂಗಿ ಇದ್ದರೆ ಅವರ ವಿದ್ಯಾಭ್ಯಾಸಕ್ಕೆ ಸರ್ಕಾರ ಜವಾಬ್ದಾರಿ ತಗೋಬೇಕು. ಅವರಿಗೆ ಮುಂದೆ ಉದ್ಯೋಗವಕಾಶ ಮಾಡಿಕೊಡಬೇಕು ಎಂದು ಅವರು ಅಗ್ರಹಿಸಿದರು.

    ವಿಜಯೋತ್ಸವವನ್ನ ಎರಡು ಕಡೆ ಯಾಕೆ ಆಯೋಜನೆ ಮಾಡಬೇಕಿತ್ತು. ಚಿನ್ನಸ್ವಾಮಿ ಸ್ಟೇಡಿಯಂಗಿಂತ ಜಾಗ ಬೇಕಾ. ಜನಕ್ಕೆ ಫ್ರಿ ಟಿಕೆಟ್ ಅಂತ ಹೇಳಿದ್ರು, ಫ್ರಿ ಅನ್ನೋದು ಇವರಿಗೆ ರೂಡಿಯಾಗಿದೆ ಅದಕ್ಕೆ ಫ್ರಿ ಸಾವು ಕೊಟ್ಟಿದ್ದಿರಾ.? ಎಂದು ಅವರು ಪ್ರಶ್ನಿಸಿದರು.

    ದುರಂತವನ್ನ ಕ್ರೀಡಾ ಮನೋಭಾವದಿಂದ ನೋಡಿ

    ಅಭಿನಂದನಾ ಸಮಾವೇಶದಲ್ಲಿ ಅಂತರಾಷ್ಟ್ರೀಯ ಆಟಗಾರರಿಗೆ ಯಾವ ರೀತಿ ಗೌರವ ಕೊಟ್ಟಿದ್ದಿರಾ.?ನಾವೆಲ್ಲಾ ಬೌರಿಂಗ್ ಆಸ್ಪತ್ರೆಗೆ ತೆರಳಿದ್ದಾಗ ಆಗ ಸಿಎಂ ಅವರು ಬೇಟಿ ಮಾಡ್ತಾರೆ. ಅಲ್ಲಿಯವರೆಗೂ ಸಿಎಂ ಜನಾರ್ಧನ ಹೋಟೆಲ್ ನಲ್ಲಿ ಟೀ ಕುಡಿತ್ತಿದ್ರಾ..? ಆಗಿರುವ ಘಟನೆಯನ್ನ ಕ್ರೀಡಾ ಮನೋಭಾವದಿಂದ ನೋಡಿ ರಾಜಕೀಯ ಮಾಡ್ಬೇಡಿ ಎಂದು ಕಿಡಿಕಾರಿದರು.

    ತೆಲಾಂಗಣದಲ್ಲಿ ಚಲನಚಿತ್ರ ಬಿಡುಯಾಗಿ ದುರ್ಘಟನೆ ನಡೆದಾಗ ಯಾವ ರೀತಿ ಕ್ರಮ ತೆಗೆದುಕೊಂಡರಿ, ಎಲ್ಲಾ ಪ್ರೊಸೆಸ್ ಮಾಡುದ್ರಿ ಅವತ್ತು ನೀವು ಆ ನಟ ಮೇಲೆ ಎಫ್ ಐ ಆರ್ ಹಾಕಿದ್ರಿ, ಕಾಂಗ್ರೆಸ್ ಸರ್ಕಾರ ಆ ನಟನನ್ನ ಅರೆಸ್ಟ್ ಮಾಡಿದ್ದೀರಾ.ಈಗ ನಿಮ್ಮ‌ ಸರ್ಕಾರ ಇದೆ ಯಾರ ಮೇಲೆ ಎಫ್ ಐ ಆರ್ ಹಾಕ್ತಿರಾ..? ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

    ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ

    ಈಗ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ಮುಂದುವರೆಸಿ ಪಾರದರ್ಶಕವಾಗಿ ಮಾಡ್ತಿವಿ ಎಂದು ಬಿಂಬಿಸಲು ಹೊರಟಿದ್ದಿರಾ.? ಅವರು ಯಾರ ಅಂಗಳದಲ್ಲಿ ಕೆಲಸ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಪಾರದರ್ಶಕವಾಗಿ ತನಿಖೆ ಮಾಡುವುದಾದರೆ ನ್ಯಾಯಾಧೀಶರ ಮೂಲಕ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದರು.

    ರಾಜ್ಯದ ಇತಿಹಾಸದ ಅತೀ ಎರಡನೇ ಕಾಲ್ತುಳಿತ ದುರಂತ

    ನಿನ್ನೆಯ ಕಾಲ್ತುಳಿತ ದುರಂತ ರಾಜ್ಯದ ಇತಿಹಾಸದ ಅತೀ ಎರಡನೇ ದೊಡ್ಡ ಪ್ರಕರಣವಾಗಿದೆ.ಭಾರತ ವರ್ಲ್ಡ್ ಕಪ್ ಗೆದ್ದಾಗ ಮುಂಬೈನಲ್ಲಿ ಪೆರೆಡ್ ನಲ್ಲಿ ಸುಮಾರು 3ಲಕ್ಷ ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು. ಯಾವುದಾದರೂ ಒಂದು ದುರ್ಘಟನೆ ನಡೆಯಿತಾ.? ಪ್ರಧಾನಿಯವರು ರಾಜ್ಯಕ್ಕೆ ಭೇಟಿ ಕೊಟ್ಟಾಗ ಪೊಲೀಸ್ ಭದ್ರತೆ ಆಯ್ತಾ.? ಎಂದು ವಾಗ್ದಾಳಿ ನಡೆಸಿದರು.

    ಸಿಎಂ ಅವರು ಮೂರರಿಂದ‌ ನಾಲ್ಕು ಲಕ್ಷ‌ ಜನ ನಿರೀಕ್ಷೆಗೂ ಮೀರಿದ ಜನ ಸೇರಿದ್ರು ಎಂದಿದ್ದಾರೆ. ಪಹಲ್ಗಾಮ್ ಘಟನೆಯ ಬಳಿಕ ಇಂಟೆಲಿಜೆನ್ಸ್‌ ಸತ್ತು ಹೋಗಿತ್ತಾ ಎಂದು ಸಿಎಂ ಅವರು ಹೇಳಿದ್ರು. ಇವತ್ತು ಟಿ ಕುಡಿಯೋಕೆ ಟಿಫನ್ ತಿನ್ನೋಕೆ ಹೋಗಿತ್ತಾ.? ಘಟನೆ ಬಗ್ಗೆ ಗೃಹ ಸಚಿವರಿಂದ ಒಂದು ಹೇಳಿಕೆ ಕೊಟ್ಟಿಲ್ಲ ಎಂದು ಕಿಡಿಕಾರಿದರು.

    ಗೃಹ ಸಚಿವರ ಅಧಿಕಾರ ಮೇಲೆ ಸವಾರಿ ಮಾಡಿ ಜಿಪಿಎ ತಗೊಂಡಿದ್ದಾರೆ ಕೆಲವರು.ಇದರ ಬಗ್ಗೆ ಗೃಹ ಸಚಿವರಿಗೆ ಯಾವುದೆ ಮಾಹಿತಿ ಇದ್ದಂಗಿಲ್ಲಾ.! ಸಿಎಂ‌ ಅವರನ್ನ ಓವರ್ ಟೇಕ್ ಮಾಡಿದ ಮಹಾನುಭಾವ ಒಬ್ಬರು ಇದ್ದಾರೆ. ಡಿಸಿಎಂ ಏನಾದ್ರು RCB ನಾಯಕ ರಜತ್ ಪಾಟಿದಾರ್ ಬದಲು ಕಫ್ ಗೆಲ್ಲೋದಕ್ಕೆ ಕಾರಣ ಆಗಿದ್ರಾ..? ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಿನ್ನೆ ಅಭಿನಂದನಾ ಸಮಾರಂಭದ ವೇಳೆ ನಾಲ್ಕೈದು ಸಾವಿನ ಪ್ರಕರಣ ಆಗಿದೆ ಅಂತ ಗೊತ್ತಾದಮೇಲೂ, ಡಿಸಿಎಂ ಅವರು ಕಫ್ ಗೆ ಮುತ್ತು ಕೊಟ್ಟಿದ್ದು, ರೀಲ್ಸ್ ಮಾಡಿದ್ರು ನಿನ್ನೆಯ ಘಟನೆಗೆ ಮುಖದಲ್ಲಿ ವಿಷಾದ ವ್ಯಕ್ತಪಡಿಸಿದ ಭಾವನೆ ಕಾಣ್ತಾ ಇರಲಿಲ್ಲ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    June 6, 2025

    ಕಾಲ್ತುಳಿತ ಪಕರಣ: CM ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್!

    June 6, 2025

    Chinnaswamy Stampede: ಗುಪ್ತಚರ ಇಲಾಖೆ ವೈಫಲ್ಯ ಹಿನ್ನೆಲೆ: ADGP ಹೇಮಂತ್ ನಿಂಬಾಳ್ಕರ್ ವರ್ಗಾವಣೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.