ಬೆಂಗಳೂರು: ಎಲ್ಲೆಲ್ಲಿ ಎಷ್ಟೆಷ್ಟು ಜನರು ಸೇರುತ್ತಾರೆ ಎಂದು ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಂದ್ಯ ಮುಗಿದ ಮೇಲೆ ನಮ್ಮ ಪೊಲೀಸರು ಬೆಳಗ್ಗೆ 3 ಗಂಟೆವರೆಗೂ ಕೆಲಸ ಮಾಡಿದ್ದಾರೆ. ಪಾಪ ನಮ್ಮ ಪೊಲೀಸರಿಗೆ ರಾತ್ರಿ ಎಲ್ಲಾ ನಿದ್ದೆನೇ ಇರಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಕಾಮನ್ ಸೆನ್ಸ್ ಇಲ್ಲ.
ಅದೇ ಪೊಲೀಸರನ್ನು ನಿಯೋಜನೆ ಮಾಡಿದರೆ ಅವರು ಹೇಗೆ ಕೆಲಸ ಮಾಡಲು ಆಗುತ್ತದೆ? ಪೊಲೀಸರು ಈ ಕಾರ್ಯಕ್ರಮಕ್ಕೆ ನಿರಾಕರಣೆ ಮಾಡಿದ್ದಾರೆ. ಆದರೆ ಬಲತ್ಕಾರದಿಂದ ಸರ್ಕಾರದಲ್ಲಿರುವುದು ನಾನಾ ನೀನಾ ಎಂದು ಪ್ರಶ್ನೆ ಕೇಳಿದೆ. ವಿಧಾನ ಸೌಧದ ಮುಂದೆ ಡ್ರೋನ್ ಎಲ್ಲಾ ಬಳಕೆ ಮಾಡಿದ್ದಾರೆ.
ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!
ಹೈಕೋರ್ಟ್ ನಿರ್ಬಂಧಿತ ಸ್ಥಳ, ಎಂತಹ ಮುಠ್ಠಾಳ ಕೆಲಸ ಮಾಡಿದೆ. ಇವತ್ತು ಕೋರ್ಟ್ ಕೂಡ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ. ಇಷ್ಟಾದರೂ ಕೂಡ ಮುಖ್ಯಮಂತ್ರಿಗಳು, ಇಷ್ಟು ಜನ ಸೇರುತ್ತಾರೆ ಎಂದು ನಾವು ಅಂದಾಜಿಸಿಲ್ಲ ಅಂದಿದ್ದಾರೆ. ಎಲ್ಲೆಲ್ಲಿ ಎಷ್ಟೆಷ್ಟು ಜನರು ಸೇರುತ್ತಾರೆ ಎಂದು ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ವಾಗ್ದಾಳಿ ನಡೆಸಿದರು.