ಬೆಂಗಳೂರು:- ಬೆಂಗಳೂರಿನ ಜೆಪಿ ಭವನದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನರಾಂ ಜಯಂತಿ ಕಾರ್ಯಕ್ರಮ ಆಚರಿಸಲಾಗಿದೆ.
ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಷತ್ ಶಾಸಕ ಟಿಎ ಶರವಣ ಅವರು, ಬಿ. ಆರ್ ಅಂಬೇಡ್ಕರ್ ಹಾಗೂ ಬಾಬುಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಟಿಎ ಶರವಣ, ಡಾ. ಬಿ ಆರ್ ಅಂಬೇಡ್ಕರ್, ಹಾಗೂ ಡಾ. ಬಾಬುಜಗಜೀವನರಾಂ ಈ ಇಬ್ಬರು ನಾಯಕರ ವ್ಯಕ್ತಿತ್ವ ಹಾಗೂ ಚರಿತ್ರೆ ಇಂದಿನ ಯುವ ಪೀಳಿಗೆಗೆ ಮಾದರಿ ಎಂದಿದ್ದಾರೆ. ಅಲ್ಲದೇ ಶೋಷಿತರಿಗಾಗಿ ಈ ಇಬ್ಬರು ನಾಯಕರು ಹೋರಾಡಿದ ಹೋರಾಟಗಳನ್ನು ಇದೇ ವೇಳೆ ಟಿಎ ಶರವಣ ನೆನೆದರು.
ಬಳಿಕ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷದ ವಿವಿಧ ಮುಖಂಡರು ಹಾಜರಿದ್ದರು.