ಕಲಘಟಗಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ತಾಲೂಕು ನೋಡಲ್ ಅಧಿಕಾರಿ ಮೇಜರ್ ಡಾ. ಸಿದ್ದಲಿಂಗಯ್ಯ ಹಿರೇಮಠ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಹೃದಯಾಘಾತದಿಂದ 21 ವರ್ಷದ ಯುವತಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!
ತಹಸೀಲ್ದಾರ್ ನೇತೃತ್ವದಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಸಕ್ತ ಸಾಲಿನಲ್ಲಿ ಸುರಿದ ಅತೀವ ಮಳೆಯಿಂದಾಗಿ ಆದ ವಿಪತ್ತು ನಿರ್ವಹಣೆ, ಹಾನಿಗೊಳಗಾದ ಮನೆಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.
ಸಂತ್ರಸ್ತರಿಗೆ ಪರಿಹಾರ ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವಂತೆ ಸೂಚಿಸಿದರು. ಈಗಾಗಲೇ ತಾಲೂಕಿನಲ್ಲಿ 20ಕ್ಕೂ ಹೆಚ್ಚು ಮನೆಗಳು. ಬಿದ್ದಿರುವ ಮಾಹಿತಿ ಬಂದಿದ್ದು, ಅದರಲ್ಲಿ ಒಂದು ಮನೆಗೆ ಈಗಾಗಲೇ ಪರಿಹಾರ
ಕಲಘಟಗಿ ತಾಲೂಕಿನ ರಾಮನಾಳ ಗ್ರಾಮದ ಬಸಲಿಂಗಯ್ಯ ಶಿವಯ್ಯ ಬೆಳಗಲಿ ಅವರ ಮನೆಗೆ ತಾಲೂಕು ನೋಡಲ್ ಅಧಿಕಾರಿ ಮೇಜರ್ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಪಂ ಇಒ ಪರಶುರಾಮ ಸಾವಂತ, ಶಂಕರ ಅಬಾಯಿ ಇದ್ದರು.
ನೀಡಲಾಗಿದೆ ಎಂದರು. ಪ್ರವಾಹದಿಂದ ಆಗುವಂಥ ಪ್ರಾಣ ಹಾಗೂ ವಸ್ತುಗಳ ಹಾನಿ ಇತರೆ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ
ತೆಗೆದುಕೊಳ್ಳಬೇಕು ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಭಾಗದಲ್ಲಿ
ಹಾನಿಗೊಳಗಾದ ಮನೆಗಳ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದರು. ಪಟ್ಟಣ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪಟ್ಟಣದ ಬಗ್ಗೆ ಹೆಚ್ಚು ನಿಗಾವಹಿಸಿ ಯಾವುದೇ ತೊಂದರೆಗಳು ಉದ್ಭವಿಸದಂತೆ ತಿಳಿಸಲಾಗಿದೆ. ಈಗಾಗಲೇ ಬಂದ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಇತರೆ ಯೋಜನೆಗಳಿಂದ ಪರಿಹಾರ ಒದಗಿಸಲಾಗುವುದು ডে১. ಎಂದು ಸಿದ್ದಲಿಂಗಯ್ಯ ತಿಳಿಸಿದರು. ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಪಂ ಇಒ ಪರಶುರಾಮ ಸಾವಂತ, ಶಂಕರ ಅಬಾಯಿ, ಉಮೇಶ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ಇದ್ದರು
ಮಾರುತಿ ಲಮಾಣಿ AIN ನ್ಯೂಸ್ ಕಲಘಟಗಿ