ಬೆಂಗಳೂರು:- ಪ್ರಶ್ನೆ ಮಾಡಿದ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಡ್ರೈವರ್ ನನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಶಾಂತ್ ಅಮಾನತಾದ ಚಾಲಕ ಎಂದು ಗುರುತಿಸಲಾಗಿದೆ. ಮೇ 23ರಂದು ಸಂಜೆ 5:40ಕ್ಕೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗ್ಯಾಂಗ್ ರೇಪ್: ಬಾಲಕಿ ಪುಸಲಾಯಿಸಿ 6 ಮಂದಿಯಿಂದ ಕೃತ್ಯ.. ಇಬ್ಬರು ಅರೆಸ್ಟ್!
ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಯಾವ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಾಳೆ ಎಂಬ ಕುರಿತು ಸ್ಪಷ್ಟತೆ ದೊರೆತಿಲ್ಲ. ಬಳಿಕ ಬಸ್ ಚಾಲಕ ಮತ್ತು ಯುವತಿ ನಡುವೆ ಜಗಳ ನಡೆದು ಬಸ್ ಚಾಲಕನನ್ನು ಪ್ರಶ್ನೆ ಮಾಡಲು ಯುವತಿ ಸಿಗ್ನಲ್ನಲ್ಲಿ ಬಸ್ ಅಡ್ಡಗಟ್ಟಿದ್ದಳು. ಆದರೆ, ಯುವತಿಯನ್ನು ಲೆಕ್ಕಿಸದೇ ಚಾಲಕ ಬಸ್ ನುಗ್ಗಿಸಲು ಮುಂದಾಗಿದ್ದಾನೆ. ಸ್ವಲ್ಪದರಲ್ಲೇ ಯುವತಿ ಪಾರಾಗಿದ್ದು, ಚಾಲಕನ ಕೃತ್ಯದಿಂದ ಜನ ಬೆಚ್ಚಿಬಿದ್ದಿದ್ದಾರೆ.
ಏಕಾಏಕಿ ಯುವತಿಯ ಮೇಲೆ ಬಸ್ ಹತ್ತಿಸಲು ಹೊರಟಿದ್ದ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಡ್ರೈವರ್ ನನ್ನು ಅಮಾನತು ಮಾಡಲಾಗಿದೆ.