ಬೆಂಗಳೂರು:- ನಗರದ ನಾಗರಬಾವಿ ಸರ್ಕಲ್, ನಮ್ಮೂರ ತಿಂಡಿ ಹೋಟೆಲ್ ಜಂಕ್ಷನ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಕಾರು ಚಾಲಕನೋರ್ವ ಡ್ರಿಂಕ್ ಅಂಡ್ ಡ್ರೈವ್ ಮಾಡಿ ಸರಣಿ ಅಪಘಾತ ನಡೆಸಿದ್ದು, ಬಳಿಕ ಡಿವೈಡರ್ ಮೇಲೆ ಕಾರು ಚಲಾಯಿಸಿದ್ದಾನೆ.
ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?
ಈ ಅಪಘಾತ ನಿನ್ನೆ ತಡರಾತ್ರಿ ನಡೆದಿದ್ದು, ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತದ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೂಡಲೇ ಕಾರು ಚಾಲಕನನ್ನು ವಶಕ್ಕೆ ಪಡೆದು ಜ್ಙಾನಭಾರತಿ ಸಂಚಾರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.