Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿವಿಜಿ ಬದುಕಿನ ಕಥೆ ‘ಮಂಕುತಿಮ್ಮನ ಕಗ್ಗ’ ಟ್ರೇಲರ್ ರಿಲೀಸ್

    By Author AINApril 22, 2025
    Share
    Facebook Twitter LinkedIn Pinterest Email
    Demo

    ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ”ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ.

    ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ‌ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ರಾಮೋಹಳ್ಳಿ ಶ್ರೀಗಳು ಸಾನಿಧ್ಯ ವಹಿಸಿದ್ದರು. ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಕಾರ್ಯದರ್ಶಿ ಪ್ರವೀಣ್ ಕುಮಾರ್, ನಿರ್ದೇಶಕ ಸಾಯಿಪ್ರಕಾಶ್, ನಿರ್ದೇಶಕಿ, ನಟಿ ರೂಪ ಅಯ್ಯರ್, ನಟ ಸುಂದರರಾಜ್, ಸಂಗೀತ ನಿರ್ದೇಶಕ ವಿ.ಮನೋಹರ್, ಸಂಗಮೇಶ್ ಉಪಾಸೆ, ನಿರ್ಮಲ ಸಿ ಎಲಿಗಾರ್, ಮಾಜಿ ಶಾಸಕ ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಅನಾವರಣ ಮಾಡಿದರು.

    ಈ ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ಬಾಲ್ಯದಲ್ಲಿ ಡಿ.ವಿ.ಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರಮಾವ ತಿಮ್ಮಣ್ಣ ಮೇಷ್ಟ್ರು. ಸೋದರಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ನನಗೆ ಹಾಗೂ ನಿರ್ಮಾಪಕರಿಗೆ ಈ ಚಿತ್ರ ಮಾಡಬೇಕೆನಿಸಿದಾಗ‌ ಗೋಖುಲೆ‌ ಇನ್ಸ್ಟಿಟ್ಯೂಟ್ ಅವರ ಬಳಿ “ಮಂಕುತಿಮ್ಮನ ಕಗ್ಗ”ವನ್ನು ಸಿನಿಮಾ ಮಾಡುತ್ತೇವೆ ಎಂದು ಕೇಳಿದಾಗ ಸಂತೋಷದಿಂದ ಒಪ್ಪಿಗೆ ನೀಡಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮೇ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ರಾಜ ರವಿಶಂಕರ್ ತಿಳಿಸಿದರು.

    ಹಲವು ವರ್ಷಗಳಿಂದ ಪ್ರಸಾದನ ಕಲಾವಿದನಾಗಿ ಕನ್ನಡ ಚಿತ್ರರಂಗದಲ್ಲಿದ್ದೇನೆ. ಇಪ್ಪತ್ತು ವರ್ಷಗಳ ಹಿಂದೆ ” ಅವಳೆ ನನ್ನ ಗೆಳತಿ” ಚಿತ್ರ ನಿರ್ಮಾಣ ಮಾಡಿದ್ದೆ. ಇದು ಎರಡನೇ ಚಿತ್ರ. ಡಿ.ವಿ.ಜಿ ಅವರ ಚಿತ್ರ ಮಾಡಿರುವುದಕ್ಕೆ ಹೆಮ್ಮೆ ಇದೆ ಎಂದು ನಿರ್ಮಾಪಕ ಶಿವಕುಮಾರ್ ತಿಳಿಸಿದರು.

    ತಿಮ್ಮಣ್ಣ ಮೇಷ್ಟ್ರು ಪಾತ್ರ ಮಾಡಿರುವುದು ಬಹಳ ಖುಷಿಯಾಗಿದೆ ಎಂದರು ಹಿರಿಯ ನಟ ರಾಮಕೃಷ್ಣ. ಚಿತ್ರದಲ್ಲಿ ನಟಿಸಿರುವ ಭವ್ಯಶ್ರೀ ರೈ, ರವಿನಾರಾಯಾಣ್, ಓಂ ಸಾಯಿಪ್ರಕಾಶ್, ಮಾಸ್ಟರ್ ರಣವೀರ್ ಹಾಗೂ ಸಂಗೀತ ನಿರ್ದೇಶಕ ಎ.ಟಿ.ರವೀಶ್ ಮುಂತಾದವರು “ಮಂಕುತಿಮ್ಮನ ಕಗ್ಗ” ಚಿತ್ರದ ಕುರಿತು ಮಾತನಾಡಿದರು.

    Demo
    Share. Facebook Twitter LinkedIn Email WhatsApp

    Related Posts

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಭಯೋತ್ಪಾದಕರನ್ನು ಮುಸ್ಲಿಮರೆಂದು ನಾನೆಂದು ಪರಿಗಣಿಸುವುದಿಲ್ಲ: ಆಮಿರ್ ಖಾನ್!

    June 15, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ವೇದಿಕೆ ಮೇಲೆ ಉದುರಿದ ಬಾಲಯ್ಯ ಮೀಸೆ, ಗಮ್‌ ಕೊಡ್ರೋ ಎಂದ ಗೋಗರಿದ ನಟ: Video ವೈರಲ್!‌

    June 14, 2025

    ಮಾತು ತಂದ ಸೋಲು..! ಕಮಲ್‌ ಹಾಸನ್‌ಗೆ ಶಾಕ್‌ ಕೊಡ್ತಾ ನೆಟ್‌ಫ್ಲಿಕ್ಸ್?

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    Karisma Kapoor: ಮತ್ತೊಂದು ದುರಂತ: ಸ್ಟಾರ್ ನಟಿಯ ಮಾಜಿ ಪತಿ ಹೃದಯಾಘಾತದಿಂದ ನಿಧನ..!

    June 13, 2025

    ಊಟಕ್ಕೆ ಕುಳಿತದ ವಿದ್ಯಾರ್ಥಿಗಳು: ಹಾಸ್ಟೆಲ್‌ ಮೇಲೆಯೇ ಅಪ್ಪಳಿಸಿದ ವಿಮಾನ: ಮುಂದೆ ನಡೆದಿದ್ದು ಘೋರ ದುರಂತ! Photo ವೈರಲ್!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.