ಹುಬ್ಬಳ್ಳಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಈ ಕುರಿತು ಇಂದು ಮಾಹಿತಿ ನೀಡಿದ ಅವರುಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು. ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ರಜೆಯ ಮೇಲೆ ತೆರಳಬೇಕಾದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದು, ರಜೆಯ ಮೇಲೆ ತೆರಳಬೇಕೆಂದು ಡಿಸಿ ತಿಳಿಸಿದ್ದಾರೆ.