ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಕರ್ನಾಟಕದ ಹಲವು ರಾಜಕಾರಣಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಮಾಜಿ ಸಚಿವರು, ಶಾಸಕರು ಮತ್ತು ಸಂಸದರ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೇ ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು ವಾಲ್ಮಿಕಿ ಹಗರಣದಲ್ಲಿ ತಪ್ಪಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಆದರೆ ಸಚಿವರ ಪಾತ್ರ ಇಲ್ಲ ಎಂದು ಸಾಬೀತಾಗಿದೆ. ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ. ರಾಜಕೀಯ ಕಾರಣಗಳಿಗೆ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಜಾತಿ ಮರು ಸಮೀಕ್ಷೆಗೆ ಹೈಕಮಾಂಡ್ ಸೂಚನೆ ನೀಡಿದ ಬಗ್ಗೆ ಮಾತನಾಡಿದ ಅವರು, ಈಗ ಮಾಡಿರುವ ವರದಿ ಹಳೆಯದಾಗಿದೆ. ಜಯ ಪ್ರಕಾಶ್ ಹೆಗಡೆ ವರದಿ ಅವೈಜ್ಞಾನಿಕ ಎಂದರು. ಆದರೆ ಹೇಗೆ ಎಂದು ಯಾರು ಹೇಳಿಲ್ಲ. ಮುಂದಿನ ದಿನಗಳಲ್ಲಿ ಹೇಗೆ ಸಮೀಕ್ಷೆ ಬರುತ್ತೆ ಎಂದು ಜನರು ಎದುರು ನೋಡುತ್ತಿದ್ದಾರೆ.
ಇಂತಹದೇ ಆರೋಪಗಳು ಮುಂದೆಯೂ ಬರಬಹುದು. ಅವೈಜ್ಞಾನಿಕ ಏನು ಎಂಬುದು ಸ್ಪಷ್ಟಪಡಿಸಬೇಕು, ಅದನ್ನು ಸರಿಪಡಿಸಿಕೊಂಡು ಮತ್ತೊಮ್ಮೆ ಸಮೀಕ್ಷೆ ಮಾಡಬೇಕು. ತೆಲಂಗಾಣದಲ್ಲಿ ಸಮೀಕ್ಷೆ ಮಾಡಿ ತೋರಿಸಿದೆ, ಇಲ್ಲೂ ಮಾಡುತ್ತೇವೆ. ಈಗಾಗಲೇ ಸಮೀಕ್ಷೆಯಿಂದ 187 ಕೊಟಿ ನಷ್ಟವಾಗಬಹುದು, ಮುಂದೆ ಹೀಗೆ ಆಗಬಾರದು. ಬಲಾಢ್ಯರಿಗೆ ಮಾತ್ರ ಅನುಕೂಲವಾಗಬಾರದು. ಹಿಂದುಳಿದ ಜನರಿಗೂ ಸಂವಿಧಾನದ ಆಶಯ ತಲುಪಬೇಕು ಎಂದು ಹೇಳಿದರು.