ಗದಗ : ಸಮಾನತೆ ರಥಯಾತ್ರೆ ಹಾಗೂ ಸಮಾನತೆ ಬುತ್ತಿ ಕುರಿತು ಗದಗ ನಗರದಲ್ಲಿ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನ ನಡೆಸಲಾಯಿತು.
ಇದೇ ವೇಳೆ ಮಾತನಾಡಿದ ಅನಿಲ್ ಮೆಣಸಿನಕಾಯಿ ಏ.14 ರಿಂದ 30ರ ಬಸವ ಜಯಂತಿಯವರೆಗೆ ಸಮಾನತೆ ರಥಯಾತ್ರೆ, ಸಮಾನತೆ ಬುತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗದಗ ಜಿಲ್ಲೆಯಾದ್ಯಂತ ಸಮಾನತೆ ರಥಯಾತ್ರೆ ಸಂಚರಿಸಲಿದೆ ಎಂದರು.
ರಂಜಾನ್ ಸಂಭ್ರಮ: ಚಿತ್ರದುರ್ಗದ ಈದ್ಗಾ ಮೈಧಾನದಲ್ಲಿ ಸಾಮೂಹಿಕ ಪ್ರಾರ್ಥನೆ!
ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಸಮಾನತೆ ಮಂದಿರ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಗಿದ ಎಂದರು. ಈ ಸಂದರ್ಭದಲ್ಲಿ ಹಾಲುಮತ ಮಹಾಸಭ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಮುಖಂಡರಾದ ರವಿಕಾಂತ ಅಂಗಡಿ, ಉಡಚಪ್ಪ, ವಸಂತ ಪಡಗದ, ರಾಘವೇಂದ್ರ ಯಳವತ್ತಿ, ಮುತ್ತು ಮಿಶೀಗೇರಿ ಸೇರಿದಂತೆ ಇತರರು ಇದ್ದರು.