ಮೈಸೂರು: ಜಮೀನು ನಮಗೆ ಸೇರಿದ್ದರೂ ಸಹ ಅಲ್ಲಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1950ನೇ ಇಸವಿಯ ದಾಖಲೆಗಳ ಆಧಾರದ ಮೇಲೆ ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ.
ತಹಸೀಲ್ದಾರ್ ಹಾಗೂ ರಾಜ್ಯ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ. ಅಂದಿನ ಮಹಾರಾಜರು ಜಮೀನು ಕೊಟ್ಟಿದ್ದರೆ ಕಿತ್ತುಕೊಳ್ಳುವುದಿಲ್ಲ. ಒಂದು ವೇಳೆ ಜಮೀನು ನಮಗೆ ಸೇರಿದ್ದರೂ ಸಹ ಅಲ್ಲಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಆ ಜಮೀನನ್ನು ರಾಜ್ಯ ಸರ್ಕಾರ ನಮಗೆ ನೀಡಿದರೂ ಕೂಡ ಅಲ್ಲಿನ ಜನರಿಗೆ ತೊಂದರೆ ಕೊಡುವುದಿಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳುತ್ತೇವೆ. ಅಲ್ಲಿನ ಜನರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ.
ಕಂದಾಯ ಗ್ರಾಮ ಮಾಡುವುದಾಗಿ ಚಾಮರಾಜನಗರ ಜಿಲ್ಲಾಡಳಿತ ಹೇಳಿದ್ದರಿಂದ ನಮ್ಮ ಜಮೀನು ಅಲ್ಲಿರುವ ಕಾರಣ ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ. ಯಾವುದೇ ವಿಚಾರವಿದ್ದರೂ, ಸಮಸ್ಯೆಗಳಿದ್ದರೂ ಆ ಭಾಗದ ಗ್ರಾಮಸ್ಥರು ನಮ್ಮನ್ನು ನೇರವಾಗಿ ಸಂಪರ್ಕಿಸಲಿ. ಗ್ರಾಮಸ್ಥರ ಬಳಿಯಿರುವ ದಾಖಲೆಗಳ ಬಗ್ಗೆ ನಮಗೆ ಗೊತ್ತಿಲ್ಲ. ಯಾವುದೇ ಕಾರಣಕ್ಕೂ ಆ ಭಾಗದ ಗ್ರಾಮಸ್ಥರು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.