ಗುಜರಾತ್: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಇದೀಗ ಮೋದಿ ಕ್ರೀಡಾಂಗಣದ ಮುಖ್ಯ ದ್ವಾರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು,
ಕೆಲ ಹೊತ್ತು ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಸಾವುನೋವುಗಳು ತಪ್ಪಿವೆ. ಆದರೆ, ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಫೈನಲ್ ಪಂದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಆಪರೇಷನ್ ಸಿಂಧೂರಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಮಾರಂಭವನ್ನು ಭಾರತೀಯ ಸೇನೆಗೆ ಸಮರ್ಪಿಸಲಾಗುತ್ತದೆ. ಖ್ಯಾತ ಗಾಯಕ ಶಂಕರ್ ಮಹದೇವನ್ ಸೇರಿದಂತೆ ಅನೇಕರು ಪ್ರದರ್ಶನ ನೀಡಲಿದ್ದಾರೆ.
ಆರ್ಸಿಬಿ ತಂಡ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಈ ಮೊದಲು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿಸಿದ್ದರೂ ಕಪ್ ಗೆದ್ದಿರಲಿಲ್ಲ. ಇದೀಗ ಮತ್ತೆ ಫೈನಲ್ ಪ್ರವೇಶಿಸಿದ್ದು, ಪಂಜಾಬ್ ಜೊತೆ ಸೆಣಸಾಡಲಿದೆ. ಈ ರೋಚಕ ಪಂದ್ಯ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.